Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜೆಡಿಎಸ್ ಮುಖಂಡ ಭೀಮಪ್ಪ ಮೀರಾಸಾಬಿಹಳ್ಳಿ ನಿಧನ

06:19 PM Dec 14, 2023 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.14 : ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮೀರಾಸಾಬಿಹಳ್ಳಿ ಎನ್.ಭೀಮಪ್ಪ(85) ಗುರುವಾರ ನಿಧನರಾಗಿದ್ದಾರೆ.

ಸರಳ, ಸಜ್ಜನ ರಾಜಕಾರಣಿಯಾಗಿದ್ದ ಎನ್.ಭೀಮಪ್ಪ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮೀರಾಸಾಬಿಹಳ್ಳಿಯ ತೋಟದಲ್ಲಿ ಗುರುವಾರ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

Advertisement

ಸಂತಾಪ : ಎನ್.ಭೀಮಪ್ಪನವರ ನಿಧನಕ್ಕೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್, ಜೆಡಿಎಸ್.ಜಿಲ್ಲಾಧ್ಯಕ್ಷ ಎನ್.ಜಯಣ್ಣ, ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ ಇವರುಗಳು ಸಂತಾಪ ಸೂಚಿಸಿದ್ದಾರೆ.

Advertisement
Tags :
BhimappachallakerechitradurgafeaturedjdsleaderMeerasabihallipassed awaysuddioneಚಳ್ಳಕೆರೆಜೆಡಿಎಸ್ನಿಧನ ವಾರ್ತೆಭೀಮಪ್ಪಮೀರಾಸಾಬಿಹಳ್ಳಿಮುಖಂಡಸುದ್ದಿಒನ್
Advertisement
Next Article