Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕೊಲ್ಕತ್ತಾ ವೈದ್ಯೆ ಪ್ರಕರಣ : ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಚಿತ್ರದುರ್ಗದಲ್ಲಿ ಇನ್ನರ್‍ವೀಲ್ಹ್ ಕ್ಲಬ್ ಪ್ರತಿಭಟನೆ

02:11 PM Aug 22, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 :  ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಇನ್ನರ್‍ವೀಲ್ಹ್ ಕ್ಲಬ್‍ನಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರ್‍ಗೆ ಮನವಿ ಸಲ್ಲಿಸಲಾಯಿತು.

Advertisement

ಮದಕರಿನಾಯಕ ಸರ್ಕಲ್‍ನಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಟೈನಿ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆಗೈದಿರುವುದು ಇಡಿ ಮನುಕುಲವೆ ನಾಚಿ ತಲೆತಗ್ಗಿಸುವಂತಾಗಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಮಾನವೀಯ ಕೃತ್ಯವೆಸಗಿರುವವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಇನ್ನರ್‍ವೀಲ್ಹ್ ಕ್ಲಬ್ ಅಧ್ಯಕ್ಷೆ ಪೂಜಾ ಪ್ರದೀಪ್ ಒತ್ತಾಯಿಸಿದರು.

ಇನ್ನರ್‍ವೀಲ್ಹ್ ಕ್ಲಬ್ ಕಾರ್ಯದರ್ಶಿ ನಮ್ರತಾ ದೇವರಾಜ್, ವೈಸ್ ಪ್ರೆಸಿಡೆಂಟ್ ವಿಜಯಕಿರಣ್, ಐ.ಪಿ.ಪಿ. ಮೋಕ್ಷರುದ್ರಸ್ವಾಮಿ, ಶ್ಯಾಮಲ ಶಿವಪ್ರಕಾಶ್, ಜ್ಯೋತಿಲಕ್ಷ್ಮಣ್, ಭಾಗ್ಯಮೂರ್ತಿ, ಬಿಜೆಪಿ. ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಶೈಲಜಾರೆಡ್ಡಿ ಹಾಗೂ ಕ್ಲಬ್‍ನ ಎಲ್ಲಾ ಸದಸ್ಯರು, ಚೈತನ್ಯ ಪಿ.ಯು.ಕಾಲೇಜಿನ ವಿದ್ಯಾರ್ಥಿಗಳು, ರೋಟರಿ ಹಾಗೂ ವಾಸವಿ ಸಂಸ್ಥೆಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
bengaluruchitradurgaculpritsdemanding severe punishmentInnerwheel ClubKolkata doctor caseprotestssuddionesuddione newsಇನ್ನರ್‍ವೀಲ್ಹ್ ಕ್ಲಬ್ಕಠಿಣ ಶಿಕ್ಷೆಕೊಲ್ಕತ್ತಾ ವೈದ್ಯೆ ಪ್ರಕರಣಚಿತ್ರದುರ್ಗಪ್ರತಿಭಟನೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article