Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

07:44 PM Sep 17, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement

ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ನಡೆದಿದೆ. ಚಲಿಸುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಗುಂಡಿಗೆ ಬಿದ್ದಿದೆ. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಇಂದು ನಡೆದಿದೆ.

ಚಳ್ಳಕೆರೆಯಿಂದ ತಿಪ್ಪಾರೆಡ್ಡಿ ಹಳ್ಳಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತವಾಗಿದೆ. ತಾಲ್ಲೂಕಿನ ಕಾಮಸಮುದ್ರ ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಅಲ್ಲೆ ರಸ್ತೆಯ ಬದಿಯ ಗುಂಡಿಗೆ ಬಿದ್ದಿದೆ. ಗುಂಡಿಗೆ ಬಿದ್ದ ಪರಿಣಾಮ ಬಸ್ಸಿನ ಮುಂದಿನ ಗಾಜು ಒಡೆದು ಹೋಗಿದೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಇನ್ನು ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಇವರಲ್ಲಿ ಮೂವರಿಗೆ ಕಾಲು ಮುರಿದಿದೆ, ಉಳಿದ ಹಲವರಿಗೆ ಸಣ್ಣಪುಟ್ಟ ಗಾಯಗಳಿದ್ದು ಅಪಾಯದಿಂದ ಪಾರಾಗಿದ್ದಾರೆ. ಅಘಾತದ ರಭಸಕ್ಕೆ ಪ್ರಯಾಣಕರು ಆತಂಕಗೊಂಡಿದ್ದಾರೆ. ಸದ್ಯ ಆ ಘಟನೆಯಿಂದ ಹೊರಬರಲು ಪ್ರಯತ್ನ ಪಡುತ್ತಿದ್ದು, ಸುಧಾರಿಸಿಕೊಳ್ಳುತ್ತಿದ್ದಾರೆ.

Advertisement
Tags :
3 seriously injuredbengaluruchitradurgaksrtc busKSRTC ಬಸ್suddionesuddione newsಚಿತ್ರದುರ್ಗಬೆಂಗಳೂರುಮೂವರಿಗೆ ಗಂಭೀರ ಗಾಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article