For the best experience, open
https://m.suddione.com
on your mobile browser.
Advertisement

ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

04:47 PM Jan 14, 2024 IST | suddionenews
ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ. 14 : ಇಂದಿರಾ ಆವಾಸ್ ಯೋಜನೆಯಡಿಯಲ್ಲಿ ಮನೆ ಬಿಲ್ ಮಂಜೂರು ಮಾಡಿಕೊಡಲು 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಘಟನೆ ಭಾನುವಾರ ನಡೆದಿದೆ.

Advertisement
Advertisement

ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಬಂಧಿತ ಆರೋಪಿ.
ತಾಲೂಕಿನ ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವರ
ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Advertisement

ದೂರುದಾರ ಪಾಂಡುರಂಗಪ್ಪ ಮನೆಯ ಬಿಲ್ ಮಂಜೂರು ಮಾಡಿ ಕೊಡಲು ಬಿಲ್ ಕಲೆಕ್ಟರ್ ಆನಂದ್ 25 ಸಾವಿರ ಲಂಚ ಕೇಳಿದ್ದರು. ಭಾನುವಾರ ಮನೆಯಲ್ಲಿ 25
ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಪೊಲೀಸರಿಗೆ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಆರೋಪಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Advertisement
Tags :
Advertisement