For the best experience, open
https://m.suddione.com
on your mobile browser.
Advertisement

ಸರಳ ಪದಗಳಲ್ಲಿ ಜೀವನ ಮೌಲ್ಯ ಬೋಧಿಸಿದ ಭಗವಾನ್ ಮಹಾವೀರ : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಮತ

02:42 PM Apr 21, 2024 IST | suddionenews
ಸರಳ ಪದಗಳಲ್ಲಿ ಜೀವನ ಮೌಲ್ಯ ಬೋಧಿಸಿದ ಭಗವಾನ್ ಮಹಾವೀರ   ಉಪವಿಭಾಗಾಧಿಕಾರಿ ಎಂ ಕಾರ್ತಿಕ್ ಅಭಿಮತ
Advertisement

ಚಿತ್ರದುರ್ಗ.ಏ.21:    ಸತ್ಯ, ಅಹಿಂಸೆ, ಬ್ರಹ್ಮಚರ್ಯ, ಆಸ್ತೇಯ, ಅಪರಿಗ್ರಹ ಎನ್ನುವ ಐದು ಸರಳ ಪದಗಳಲ್ಲಿ ಜೀವನ ಮೌಲ್ಯಗಳನ್ನು ಭಗವಾನ್ ಮಹಾವೀರ ಬೋಧಿಸಿದ್ದಾರೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.

Advertisement
Advertisement

Advertisement

ನಗರದ ತ.ರಾ.ಸು ರಂಗಮಂದಿರದಲ್ಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಭಗವಾನ್ ಮಹಾವೀರ ಸರಳ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

Advertisement
Advertisement

ಸತ್ಯ ಹೇಳುವುದು, ಪರರನ್ನು ಹಾಗೂ ಸಕಲ ಜೀವಗಳ ಎಡೆಗೆ ಅಹಿಂಸಾ ಭಾವದಿಂದ ನಡೆದುಕೊಳ್ಳುವುದು. ಶುದ್ಧ ಚಾರಿತ್ರ್ಯ ಕಾಪಾಡಿಕೊಳ್ಳುವುದು. ಪರ ವಸ್ತುಗಳನ್ನು ಕದಿಯದಿರುವುದು. ಎಲ್ಲಾ ಭವ ಬಂಧನಗಳಿಂದ ಮುಕ್ತವಾಗಿರಬೇಕು ಎಂಬುದು ಮಹಾವೀರ ಬೋಧನೆ ತಿರುಳಾಗಿದೆ.

ಮಹಾವೀರರ ಈ ಬೋಧನೆಗಳು ಸರಳ ಪದಗಳಲ್ಲಿ ಇವೆ. ಇವುಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ. ಇದರಿಂದ ಹಿಂಸೆ, ಯುದ್ಧಗಳು ಭೀತಿಯಿಲ್ಲದೆ ಎಲ್ಲರು ಪ್ರಗತಿ ಕಾಣಬಹುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಪ್ರಾಯಪಟ್ಟರು.

ಜೈನ ಸಮಾಜದ ಮುಖಂಡ ವಸ್ತಿಮಲ್ ಮಾತನಾಡಿ, ಮಹಾವೀರ ಸರಳ ಬೋಧನೆ ಎಂದರೆ ‘ಜಿಯೋ ಜೀನೇದೋ’ ಇದರ ಅರ್ಥ ನೀವು ಬದುಕಿ ಇತರರಿಗೆ ಬದುಕಲು ಬಿಡಿ ಎಂಬುದಾಗಿದೆ. ಕಾಮ, ಕ್ರೋಧ, ಮೋಹ, ಮದ, ಮಾತ್ಸರ್ಯಗಳನ್ನು ಜಯಿಸಿದರೆ ಮುಕ್ತಿ ಪಡೆಯಬಹುದಾಗಿದೆ. ರಾಜ ಮನೆತನದಲ್ಲಿ ಹುಟ್ಟಿದರೂ ವೈಭೋಗ ತೊರೆದು ಸನ್ಯಾಸತ್ವನ್ನು ಮಹಾವೀರರು ಪಡೆದುಕೊಂಡರು. ಇದೇ ಹಾದಿಯಲ್ಲಿ ಇಂದಿಗೂ ಹಲವಾರು ಕೋಟ್ಯಾಧಿಪತಿಗಳು ತಮ್ಮ ಎಲ್ಲಾ ಆಸ್ತಿ ಪಾಸ್ತಿಗಳನ್ನ ದಾನ ಮಾಡಿ ಸನ್ಯಾಸ ದೀಕ್ಷೆ ಪಡೆಯುವುದನ್ನು ನೋಡಬಹುದು ಎಂದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ನಾಡಗೀತೆ ಪ್ರಸ್ತುತ ಪಡಿಸುವುದರೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ತಹಶೀಲ್ದಾರ್ ಡಾ.ನಾಗವೇಣಿ, ಜೈನ ಸಮುದಾಯದ ಮುಖಂಡರಾದ ಪ್ರೇಮ್‍ಚಂದ್,ಮನ್ಸಿರಾಜ್ ಸೇರಿದಂತೆ ಮತ್ತಿತರರು ಇದ್ದರು.

Advertisement
Tags :
Advertisement