For the best experience, open
https://m.suddione.com
on your mobile browser.
Advertisement

ಮೊಳಕಾಲ್ಮೂರು | ಲಾರಿಗೆ ಬೈಕ್ ಡಿಕ್ಕಿ ಓರ್ವ ಮೃತ

07:40 AM Aug 18, 2024 IST | suddionenews
ಮೊಳಕಾಲ್ಮೂರು   ಲಾರಿಗೆ ಬೈಕ್ ಡಿಕ್ಕಿ ಓರ್ವ ಮೃತ
Advertisement

Advertisement
Advertisement

ಸುದ್ದಿಒನ್, ಮೊಳಕಾಲ್ಮೂರು, ಆಗಸ್ಟ್. 18 : ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ
ನಾಗಸಮುದ್ರ ಗೇಟ್ ಬಳಿ ಇಂದು(ಭಾನುವಾರ) ಬೆಳಗಿನ ಜಾವ ಸುಮಾರು 3:30 ರ ವೇಳೆಯಲ್ಲಿ ನಡೆದಿದೆ.

ಬಳ್ಳಾರಿ - ಬೆಂಗಳೂರು ಹೆದ್ದಾರಿಯಲ್ಲಿ ರಾಯಚೂರಿನಿಂದ ಬೆಂಗಳೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಇಬ್ಬರು ವ್ಯಕ್ತಿಗಳು ನಾಗಸಮುದ್ರ ಗೇಟ್ ಸಮೀಪ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿದ್ದ ಮತ್ತೋರ್ವ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿದ್ದು ಸಮೀಪದ ರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೂ ಮೃತ ಬೈಕ್ ಸವಾರನ ಗುರುತು ಪತ್ತೆ ಆಗಿಲ್ಲ. ಮತ್ತು ಲಾರಿಯೂ ಪತ್ತೆಯಾಗಿಲ್ಲ.

Advertisement

ಸ್ಥಳಕ್ಕೆ ರಾಂಪುರ PSI ಮಹೇಶ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Tags :
Advertisement