For the best experience, open
https://m.suddione.com
on your mobile browser.
Advertisement

ಮೊಳಕಾಲ್ಮೂರು | ಚಿರತೆ ದಾಳಿಗೆ ಗಂಭೀರವಾಗಿ ಗಾಯಗೊಂಡ ರೈತ

12:39 PM Jan 20, 2024 IST | suddionenews
ಮೊಳಕಾಲ್ಮೂರು   ಚಿರತೆ ದಾಳಿಗೆ ಗಂಭೀರವಾಗಿ ಗಾಯಗೊಂಡ ರೈತ
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.20 : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ.

Advertisement
Advertisement

ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ  ಹಾನಗಲ್ ಗ್ರಾಮ ಪಂಚಾಯಿತಿಗೆ ಸೇರಿದ ಬೊಮ್ಮಲಿಂಗನಹಳ್ಳಿ ಗ್ರಾಮದ ಬಸವರಾಜ (50 ವರ್ಷ) ಇಂದು ಬೆಳಿಗ್ಗೆ ಜಮೀನಿಗೆ ಹೋಗುವ ಸಮಯದಲ್ಲಿ ಚಿರತೆ ದಾಳಿ ಮಾಡಿದೆ.
ಚಿರತೆ ದಾಳಿಯಿಂದಾಗಿ ವ್ಯಕ್ತಿಯ ಕರಳು ಹೊರಗೆ ಬಂದಿದ್ದು, ಈತನ ಸ್ಥಿತಿ ಚಿಂತಾ ಜನಕವಾಗಿದೆ. ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಪಾಂಡುರಂಗಪ್ಪ ಗಾಯಾಳು ಬಸವರಾಜ ಅವರನ್ನು ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.

Advertisement

ಅರಣ್ಯಾಧಿಕಾರಿಗಳು ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advertisement
Advertisement

Advertisement
Tags :
Advertisement