For the best experience, open
https://m.suddione.com
on your mobile browser.
Advertisement

ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್‍ರವರನ್ನು ಅಭಿನಂದಿಸಿದ ನಗರಸಭೆಯ ಪೌರಾಯುಕ್ತರು ಮತ್ತು ಸಿಬ್ಬಂದಿ

09:37 PM Mar 04, 2024 IST | suddionenews
ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ ಎಸ್ ಮಂಜುನಾಥ್‍ರವರನ್ನು ಅಭಿನಂದಿಸಿದ ನಗರಸಭೆಯ ಪೌರಾಯುಕ್ತರು ಮತ್ತು ಸಿಬ್ಬಂದಿ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ ಮಾ. 04 : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಉಪಾಧ್ಯಕ್ಷರಾಗಿ ಸರ್ಕಾರದಿಂದ ನೇಮಕವಾಗಿರುವ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್‍ರವರನ್ನು ಇಂದು ಅವರ ನಿವಾಸದಲ್ಲಿಂದು ಚಿತ್ರದುರ್ಗ ನಗರಸಭೆಯ ಪೌರಾಯುಕ್ತರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದಿಸಿದರು.

Advertisement
Advertisement

ಒಂದು ಕಾಲದಲ್ಲಿ ನಗರಸಭೆಯ ಸಿಬ್ಬಂದಿ ಮಾಡಿದ ಕೆಲಸಕ್ಕೆ ಸರಿಯಾದ ರೀತಿಯ ವೇತನವೂ ಸಿಗದ ಪರಿಸ್ಥಿತಿಯಲ್ಲಿ ಮಂಜುನಾಥ್‍ರವರ ನೇತೃತ್ವದಲ್ಲಿ ಹೋರಾಟವನ್ನು ಮಾಡುವುದರ ಮೂಲಕ ಸರ್ಕಾರದಿಂದ ನೇರವಾಗಿ ವೇತನವನ್ನು ಪಡೆಯುವಂತೆ ಮಾಡುವಲ್ಲಿ ಮಂಜುನಾಥ್‍ರವರ ಪಾತ್ರ ಆಧಿಕವಾಗಿದೆ. ಇವರು ಮಾಡಿದ ಹೋರಾಟ, ಶ್ರಮದ ಫಲವಾಗಿ ಇಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ಅವರನ್ನು ಗೌರವಿಸಿ ಈಗ ಈ ಹುದ್ದೆಯನ್ನು ನೀಡಿದೆ ಮುಂದಿನ ದಿನಮಾನದಲ್ಲಿ ಕಾರ್ಮಿಕರಿಗೆ ಉತ್ತಮವಾದ ಸೌಲಭ್ಯವನ್ನು ಕಲ್ಪಿಸುವಲ್ಲಿ ಮುಂದಾಗಲಿ ಎಂದು ಎಲ್ಲರು ಶುಭ ಕೋರಿದರು.

ಈ ಸಂದರ್ಭದಲ್ಲಿ ಪೌರಾಯುಕ್ತರಾದ ರೇಣುಕಾ, ವ್ಯವಸ್ಥಾಪಕರಾದ ಶ್ರೀಮತಿ ಮಂಜುಳಮ್ಮ, ಕಂದಾಯ ಆಧಿಕಾರಿ ಜಯ್ಯಪ್ಪ, ಆರೋಗ್ಯ ಆಧಿಕಾರಿ ಪುಟ್ಟಸ್ವಾಮಿ, ಸೇರಿದಂತೆ ಸಿಬ್ಬಂದಿಗಳಾದ ಲವ, ರೇಣಿಕಾ, ಭೀಷ್ಮ ಮತ್ತು ಇತರರು ಉಪಸ್ಥಿತರಿದ್ದರು.

Advertisement
Tags :
Advertisement