Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್‍ರವರನ್ನು ಅಭಿನಂದಿಸಿದ ನಗರಸಭೆಯ ಪೌರಾಯುಕ್ತರು ಮತ್ತು ಸಿಬ್ಬಂದಿ

09:37 PM Mar 04, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 04 : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಉಪಾಧ್ಯಕ್ಷರಾಗಿ ಸರ್ಕಾರದಿಂದ ನೇಮಕವಾಗಿರುವ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್‍ರವರನ್ನು ಇಂದು ಅವರ ನಿವಾಸದಲ್ಲಿಂದು ಚಿತ್ರದುರ್ಗ ನಗರಸಭೆಯ ಪೌರಾಯುಕ್ತರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದಿಸಿದರು.

Advertisement

ಒಂದು ಕಾಲದಲ್ಲಿ ನಗರಸಭೆಯ ಸಿಬ್ಬಂದಿ ಮಾಡಿದ ಕೆಲಸಕ್ಕೆ ಸರಿಯಾದ ರೀತಿಯ ವೇತನವೂ ಸಿಗದ ಪರಿಸ್ಥಿತಿಯಲ್ಲಿ ಮಂಜುನಾಥ್‍ರವರ ನೇತೃತ್ವದಲ್ಲಿ ಹೋರಾಟವನ್ನು ಮಾಡುವುದರ ಮೂಲಕ ಸರ್ಕಾರದಿಂದ ನೇರವಾಗಿ ವೇತನವನ್ನು ಪಡೆಯುವಂತೆ ಮಾಡುವಲ್ಲಿ ಮಂಜುನಾಥ್‍ರವರ ಪಾತ್ರ ಆಧಿಕವಾಗಿದೆ. ಇವರು ಮಾಡಿದ ಹೋರಾಟ, ಶ್ರಮದ ಫಲವಾಗಿ ಇಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ಅವರನ್ನು ಗೌರವಿಸಿ ಈಗ ಈ ಹುದ್ದೆಯನ್ನು ನೀಡಿದೆ ಮುಂದಿನ ದಿನಮಾನದಲ್ಲಿ ಕಾರ್ಮಿಕರಿಗೆ ಉತ್ತಮವಾದ ಸೌಲಭ್ಯವನ್ನು ಕಲ್ಪಿಸುವಲ್ಲಿ ಮುಂದಾಗಲಿ ಎಂದು ಎಲ್ಲರು ಶುಭ ಕೋರಿದರು.

ಈ ಸಂದರ್ಭದಲ್ಲಿ ಪೌರಾಯುಕ್ತರಾದ ರೇಣುಕಾ, ವ್ಯವಸ್ಥಾಪಕರಾದ ಶ್ರೀಮತಿ ಮಂಜುಳಮ್ಮ, ಕಂದಾಯ ಆಧಿಕಾರಿ ಜಯ್ಯಪ್ಪ, ಆರೋಗ್ಯ ಆಧಿಕಾರಿ ಪುಟ್ಟಸ್ವಾಮಿ, ಸೇರಿದಂತೆ ಸಿಬ್ಬಂದಿಗಳಾದ ಲವ, ರೇಣಿಕಾ, ಭೀಷ್ಮ ಮತ್ತು ಇತರರು ಉಪಸ್ಥಿತರಿದ್ದರು.

Advertisement
Tags :
bengaluruchitradurgasuddionesuddione newsಉಪಾಧ್ಯಕ್ಷ ಜಿ.ಎಸ್.ಮಂಜುನಾಥ್‍ಕಾರ್ಮಿಕ ಕಲ್ಯಾಣ ಮಂಡಳಿಚಿತ್ರದುರ್ಗನಗರಸಭೆಯ ಪೌರಾಯುಕ್ತರು ಸಿಬ್ಬಂದಿಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article