Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸ್ಥಳೀಯರಿಗೆ ಕೆಲಸ ಕೊಡುವಂತೆ ಒತ್ತಾಯಿಸಿ ಜುಲೈ 24 ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

09:08 PM Jul 21, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಸಿರಿಗೆರೆಯ ತಣಿಗೆಹಳ್ಳಿ ಸಮೀಪ ಡಿ.ಮದಕರಿಪುರದ ಹತ್ತಿರವಿರುವ ಗಣಿಬಾಧಿತ ಪ್ರದೇಶಗಳ ಜನ ಶನಿವಾರದಿಂದ ಪ್ರತಿಭಟನೆ ಆರಂಭಿಸಿದ್ದು, ಬುಧವಾರ ಮಧ್ಯಾಹ್ನದ ವೇಳೆಗೆ 52 ಲಾರಿಗಳೊಂದಿಗೆ ಕಾಲ್ನಡಿಗೆ ಜಾಥ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸ್ಥಳೀಯರಿಗೆ ಕೆಲಸ ಕೊಡುವಂತೆ ಒತ್ತಾಯಿಸಲಿದ್ದಾರೆ.

Advertisement

ಜಿಲ್ಲಾ ಬಂಜಾರ ಲಂಬಾಣಿ ಸಮಾಜ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇನೆ, ವಾಲ್ಮೀಕಿ ಸೇನೆ ಹಾಗೂ ವಾಲ್ಮೀಕಿ ಜನಾಂಗದ ವತಿಯಿಂದ ಜಾನ್ ಮೈನ್ಸ್, ವೇದಾಂತ ಮೈನ್ಸ್‍ನವರು ತೋರುತ್ತಿರುವ ದರ್ಪದ ವಿರುದ್ದ ಅನಿರ್ಧಿಷ್ಠಾವಧಿ ಧರಣಿ ನಡೆಸುತ್ತಿರುವವರು ಮಂಗಳವಾರ ಬೆಳಿಗ್ಗೆ ಕಾಲ್ನಡಿಗೆ ಜಾಥ ಆರಂಭಿಸಿ ಹದಿನೈದು ಕಿ.ಮೀ. ಬಳಿಕ ರಾತ್ರಿ ಮಾರ್ಗ ಮಧ್ಯದಲ್ಲಿ ಎಲ್ಲಿಯಾದರೂ ತಂಗಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಸೇರಿದ 52 ಲಾರಿಗಳನ್ನು ಜಾನ್ ಮೈನ್ಸ್ ಹಾಗೂ ವೇದಾಂತ ಮೈನ್ಸ್ ನವರು ಗಣಿಗಾರಿಕೆಗೆ ಬಳಸಿಕೊಂಡು ಈಗ ಏಕಾಏಕಿ ನಿಲ್ಲಿಸಿರುವುದರಿಂದ ಫೈನಾನ್ಸ್‍ಗಳಿಂದ ಸಾಲ ಪಡೆದಿರುವವರು ಇ.ಎಂ.ಐ. ಹಾಗೂ ಸಾಲಗಳನ್ನು ಕಟ್ಟಲಾಗದೆ ಬೀದಿಗೆ ಬಿದ್ದಿದ್ದಾರೆ. ಹೊರಗಿನಿಂದ ಕೆಲಸಗಾರರನ್ನು ಕರೆಸಿಕೊಂಡಿರುವ ಎರಡು ಮೈನ್ಸ್‌ ನವರು ಸ್ಥಳೀಯರಿಗೆ ಏಕೆ ಕೆಲಸ ಕೊಡುತ್ತಿಲ್ಲ ಎಂದು ಪ್ರತಿಭಟನಾನಿರತರು ಪ್ರಶ್ನಿಸುತ್ತಿದ್ದಾರೆ.

ಬಂಜಾರ ಲಂಬಾಣಿ ಸಮಾಜದ ಜಿಲ್ಲಾಧ್ಯಕ್ಷ ಎಸ್.ಸತೀಶ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ಮದಕರಿನಾಯಕ ಯುವಸೇನೆಯ ರಾಜಣ್ಣ, ತಿಪ್ಪೇಶಿ, ಸುಂದರಮೂರ್ತಿ, ರಘು, ಉಮಾಪತಿ, ತಿಪ್ಪೇಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Advertisement
Tags :
bengaluruchitradurgadc officedemandingDistrict Collector's Officeemploymentlocals. ಸುದ್ದಿಒನ್suddionesuddione newsಚಿತ್ರದುರ್ಗಜಾಥಜಿಲ್ಲಾಧಿಕಾರಿ ಕಚೇರಿಬೆಂಗಳೂರುಮುತ್ತಿಗೆಸುದ್ದಿಒನ್ ನ್ಯೂಸ್ಸ್ಥಳೀಯರು
Advertisement
Next Article