Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅನ್ಯಾಯ, ಭ್ರಷ್ಟಾಚಾರ, ಲಂಚದ ಹಾವಳಿ ವಿರುದ್ದ ಜನಹಿತ ಹಿರಿಯ ನಾಗರೀಕರ ಹೋರಾಟ ಸಮಿತಿ ರಚಿನೆ : ಪಿ.ಈ.ವೆಂಕಟಸ್ವಾಮಿ

05:16 PM Oct 03, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ಅನ್ಯಾಯ, ಭ್ರಷ್ಟಾಚಾರ, ಲಂಚದ ಹಾವಳಿ ವಿರುದ್ದ ಹೋರಾಡಲು ಜನಹಿತ ಹಿರಿಯ ನಾಗರೀಕರ ಹೋರಾಟ ಸಮಿತಿ ರಚಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಪಿ.ಈ.ವೆಂಕಟಸ್ವಾಮಿ ತಿಳಿಸಿದರು.

Advertisement

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೂರು ತಿಂಗಳ ಹಿಂದೆ ಸಮಿತಿ ರಚಿಸಿ ನೊಂದಾಯಿಸಲಾಗಿದೆ. ಚಿತ್ರದುರ್ಗದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಅನೇಕ ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ನಗರದಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಸ್ವಚ್ಚತೆ ಮರೀಚಿಕೆಯಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸಗಳಾಗುವುದಿಲ್ಲ. ಚಳ್ಳಕೆರೆ ಗೇಟ್‍ನಲ್ಲಿ ಜನಸಂದಣಿ ಹಾಗೂ ವಾಹನಗಳ ದಟ್ಟಣೆ ಜಾಸ್ತಿಯಾಗುತ್ತಿರುವುದರಿಂದ ಅಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣವಾಗಬೇಕು. ಶನಿಮಹಾತ್ಮ ದೇವಾಲಯದ ರಸ್ತೆ ಅದ್ವಾನವಾಗಿದೆ. ಭದ್ರಾಮೇಲ್ದಂಡೆ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವಂತೆ ಪಿ.ಈ.ವೆಂಕಟಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.

ಜನಹಿತ ಹಿರಿಯ ನಾಗರೀಕರ ಹೋರಾಟ ಸಮಿತಿ ಕಾರ್ಯದರ್ಶಿ ವೈ.ಕೆ.ಮಹಾಸ್ವಾಮಿ, ನಿರ್ದೇಶಕರುಗಳಾದ ಹೆಚ್.ಕನಕದಾಸ್, ಜಿ.ಟಿ.ಲಕ್ಷ್ಮಿನಾರಾಯಣಸ್ವಾಮಿ, ಹನುಮಂತರೆಡ್ಡಿ, ಈಶ್ವರಪ್ಪ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Tags :
bengaluruBriberychitradurgacorruptioninjusticeP.E.VenkataswamySenior Citizens Struggle Committeesuddionesuddione newsಅನ್ಯಾಯಚಿತ್ರದುರ್ಗಪಿ.ಈ.ವೆಂಕಟಸ್ವಾಮಿಬೆಂಗಳೂರುಭ್ರಷ್ಟಾಚಾರಲಂಚದ ಹಾವಳಿಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯ ನಾಗರೀಕರ ಹೋರಾಟ ಸಮಿತಿ
Advertisement
Next Article