For the best experience, open
https://m.suddione.com
on your mobile browser.
Advertisement

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ : ಜಯ ಕರ್ನಾಟಕ ಜನಪರ ವೇದಿಕೆ ಒತ್ತಾಯ

02:26 PM Jun 19, 2024 IST | suddionenews
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ   ಜಯ ಕರ್ನಾಟಕ ಜನಪರ ವೇದಿಕೆ ಒತ್ತಾಯ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜೂನ್. 19 : ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಕೂಡಲೆ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

ಪೆಟ್ರೋಲ್ ಲೀಟರ್‍ಗೆ ಮೂರು ರೂ. ಡೀಸೆಲ್ ಲೀಟರ್‍ಗೆ ಮೂರು ರೂ. ಐವತ್ತು ಪೈಸೆಗಳನ್ನು ಏರಿಸಿ ಬಡವರು, ರೈತರು, ಜನಸಾಮಾನ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೊಂದರೆ ಕೊಡುತ್ತಿದೆ. ಬೆಲೆ ಏರಿಕೆಯಿಂದ ಬಸ್ ಪ್ರಯಾಣ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಏರಿಕೆಯಾಗುತ್ತದೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೆ ದರ ಏರಿಕೆಯನ್ನು ಇಳಿಸಬೇಕೆಂದು ಮನವಿ ಮಾಡಿದರು.

Advertisement
Advertisement

ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಬಿ.ಟಿ.ರಾಜೇಂದ್ರ, ಉಪಾಧ್ಯಕ್ಷ ಸಿದ್ದೇಶ್ವರ, ಪ್ರಧಾನ ಕಾರ್ಯದರ್ಶಿ ಸಿ.ಅಭಿಲಾಷ್, ತಾಲ್ಲೂಕು ಅಧ್ಯಕ್ಷ ಬಿ.ಅಶೋಕ್, ಕಾರ್ಯದರ್ಶಿ ಡಿ.ಗಿರೀಶ್, ಕಾರ್ಯಾಧ್ಯಕ್ಷ ನಿರಂಜನ್ ವಿ. ಸತೀಶ್, ರೋಹನ್, ಸ್ವಾಮಿ, ಪ್ರಿಯದರ್ಶನ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Advertisement
Tags :
Advertisement