For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಫೆಬ್ರವರಿ 27 ಹಾಗೂ 28 ರಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ | ಎಲ್ಲೆಲ್ಲಿ ? ಎಂದು ಮತ್ತು ಯಾವ ಕಾರಣಕ್ಕಾಗಿ ದೂರು ಸಲ್ಲಿಸಬಹುದು ?

09:33 PM Feb 23, 2024 IST | suddionenews
ಚಿತ್ರದುರ್ಗ   ಫೆಬ್ರವರಿ 27 ಹಾಗೂ 28 ರಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ   ಎಲ್ಲೆಲ್ಲಿ   ಎಂದು ಮತ್ತು ಯಾವ ಕಾರಣಕ್ಕಾಗಿ ದೂರು ಸಲ್ಲಿಸಬಹುದು
Advertisement

ಚಿತ್ರದುರ್ಗ.ಫೆ.23:  ಫೆ.27 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಮೊಳಕಾಲ್ಮೂರು, ಹೊಸದುರ್ಗ ಹಾಗೂ ಹಿರಿಯೂರು, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿ,

Advertisement
Advertisement

ಫೆಬ್ರವರಿ 28 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಚಳ್ಳಕೆರೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

Advertisement

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಲ್ಲಿ, ಸರ್ಕಾರಿ ಯೋಜನೆಗಳನ್ನು ತಲುಪಿಸಲು ಅನಾವಶ್ಯಕ ವಿಳಂಬ, ಕರ್ತವ್ಯ ನಿರ್ಲಕ್ಷತನ, ತಾರತಮ್ಯ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇದ್ದಲ್ಲಿ ನಿಗಧಿತ ನಮೂನೆಯಲ್ಲಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ತಿಳಿಸಿದ್ದಾರೆ.

Advertisement
Advertisement

Advertisement
Tags :
Advertisement