Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನಿವೃತ್ತ ನೌಕರ ಜಯರಾಮ್ ನಿಧನ

04:25 PM Aug 30, 2024 IST | suddionenews
Advertisement

ಚಿತ್ರದುರ್ಗ ಆಗಸ್ಟ್. 30 :  ನಗರಸಭೆ ಸದಸ್ಯೆ ಶ್ರೀಮತಿ ನಾಗಮ್ಮ ಅವರ ಪತಿ ಹಾಗೂ ಅರೋಗ್ಯ ಇಲಾಖೆಯ ನಿವೃತ್ತ ನೌಕರ ಜಯರಾಮ್ (82 ವರ್ಷ) ಅವರು ಶುಕ್ರವಾರ ಮುಂಜಾನೆ ನಿಧನ ಹೊಂದಿದರು.

Advertisement

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಂದ ಬಿಡುಗಡೆಯಾದ ಬಳಿಕ ಚಿತ್ರದುರ್ಗದ ವೇದಾಂತ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ನಿಧನ ಹೊಂದಿದ್ದಾರೆ

ಮೃತರು ಪತ್ನಿ , ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು  ಅಗಲಿದ್ದಾರೆ.  ಜಯರಾಮ್ ಅವರ ಪುತ್ರ ಮಹೇಶ್ ಮೂರು ಅವಧಿಗೆ ನಿರಂತರವಾಗಿ ನಗರಸಭೆಗೆ ಸದಸ್ಯರಾಗಿ ಆಯ್ಕೆ ಆಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪತ್ನಿ ಶ್ರೀಮತಿ ನಾಗಮ್ಮ ಅವರು ಚುನಾವಣೆ ಸ್ಪರ್ಧಿಸಿ ಗೆದ್ದಿದ್ದರು. ಮೃತರ ಅಂತ್ಯ ಕ್ರಿಯೆ ಶುಕ್ರವಾರ ಸಂಜೆ ಜೋಗಿಮಟ್ಟಿ ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.

Advertisement

ಜಯರಾಮ್ ಅವರ ನಿಧನ ವಿಷಯ ತಿಳಿದ ಕೂಡಲೇ ಅಪಾರ ಸಂಖ್ಯೆಯಲ್ಲಿ ಬಂದುಗಳು ಸಾರ್ವಜನಿಕರು ಮತ್ತು ರಾಜಕೀಯ ಮುಖಂಡರು ಆಗಮಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ನಗರ ಸಭೆ ಅಧ್ಯಕ್ಷೆ ಸುಮಿತಾ ,ಉಪಾದ್ಯಕ್ಷರಾದ ಶ್ರೀದೇವಿ ಸದಸ್ಯರಾದ ಹೆಚ್ .ಭಾಸ್ಕರ್ , ಹೆಚ್. ಶ್ರೀನಿವಾಸ್ . ರಮೇಶ್ .ವೆಂಕಟೇಶಪ್ಪ , ದಾರುಕ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ರಾಮಸ್ವಾಮಿ,  ಗುತ್ತಿಗೆದಾರ ಶಿವಕುಮಾರ್ . ಅಶೋಕ್ , ಸೇರಿದಂತೆ ಹಲವಾರು ಆಗಮಿಸಿ ನಮನ ಸಲ್ಲಿಸಿದರು.

Advertisement
Tags :
bengaluruchitradurgaJayarampasses awayRetired employeesuddionesuddione newsಚಿತ್ರದುರ್ಗಜಯರಾಮ್ನಿಧನ ವಾರ್ತೆನಿವೃತ್ತ ನೌಕರಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article