Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಎಸ್.ಜೆ.ಎಂ. ವಿದ್ಯಾಪೀಠದ ಸಿಇಒ ಎಂ. ಭರತ್‍ಕುಮಾರ್ ಅವರನ್ನು ಬಿಡುಗಡೆಗೊಳಿಸಿ ಆದೇಶಿದ ಡಾ. ಶಿವಮೂರ್ತಿ ಮುರುಘಾ ಶರಣರು

05:41 PM Dec 08, 2023 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್ 08 :  ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ಭರತ್‍ಕುಮಾರ್ ಅವರನ್ನು ಎಸ್.ಜೆ.ಎಂ. ವಿದ್ಯಾಪೀಠ ಹಾಗೂ ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕರ್ತವ್ಯಗಳಿಂದ ದಿ. 8-12-23ರಿಂದ ತಕ್ಷಣ ಜಾರಿಗೆ ಬರುವಂತೆ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ ಎಂದು ಶ್ರೀಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement

ಇದೇ ಡಿಸೆಂಬರ್ 5 ರಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಮುರುಘಾಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತವನ್ನು ಮುರುಘಾಮಠದ ಪೀಠಾಧಿಪತಿಗಳು ಮತ್ತು ಎಸ್.ಎಂ ವಿದ್ಯಾಪೀಠದ ಅಧ್ಯಕ್ಷರಿಗೆ ಹಸ್ತಾಂತರಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು  ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ಭರತ್‍ಕುಮಾರ್ ಅವರನ್ನು
ಬಿಡುಗಡೆಗೊಳಿಸಿದ್ದಾರೆ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂ. ಭರತ್‍ಕುಮಾರ್ ಅವರು ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ ವರ್ಷ ಡಿಸೆಂಬರ್ 5 ರಂದು ಅಧಿಕಾರ ಸ್ವೀಕರಿಸಿದ್ದರು.

Advertisement

Advertisement
Tags :
CEO M. Dr. Bharat KumarchitradurgaDr Shivamurthy Muruga sharanaruordered to be releasedS.J.M. Vidyapeethಎಸ್.ಜೆ.ಎಂ. ವಿದ್ಯಾಪೀಠಚಿತ್ರದುರ್ಗಡಾ. ಶಿವಮೂರ್ತಿ ಮುರುಘಾ ಶರಣರುಸಿಇಒ ಎಂ. ಭರತ್‍ಕುಮಾರ್
Advertisement
Next Article