Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶರಣ ಸಂಸ್ಕೃತಿ ಉತ್ಸವ | ಚಿತ್ರದುರ್ಗದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ - ಶ್ರೀ ಜಯದೇವ ಕಪ್- 2024 : ಶ್ರೀರಾಮ್

01:12 PM Aug 25, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ,ಆ. 25 : ಶರಣ ಸಂಸ್ಕೃತಿ ಉತ್ಸವ-2024ರ ಅಂಗವಾಗಿ ನಡೆಯುವ ಕ್ರೀಡಾಕೂಟಕ್ಕೆ ಶ್ರೀ ಜಯದೇವ ಕಪ್-2024 ಎಂದು ಹೆಸರಿಡಲಾಗಿದ್ದು, ರಾಜ್ಯಮಟ್ಟದ ಹೊನಲುಬೆಳಕಿನ ಮಹಿಳೆಯರ ಮತ್ತು ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ಕ್ರೀಡಾ ಸಮಿತಿಯ ಅಧ್ಯಕ್ಷ ಮಾಜಿ ನಗರಸಭಾ ಸದಸ್ಯ ಶ್ರೀರಾಮ್ ಅವರು ತಿಳಿಸಿದ್ದಾರೆ.

Advertisement

ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ಕ್ರೀಡಾಕೂಟವು ಮೂರುದಿನಗಳ ಕಾಲ ನಡೆಯಲಿದ್ದು, ಕ್ರೀಡಾಕೂಟ ಸಮಿತಿಯ ಗೌರವಾಧ್ಯಕ್ಷರಾಗಿ ಭೀಮಸಮುದ್ರದ ಉದ್ಯಮಿ ಶಂಕರಮೂರ್ತಿ, ಉಪಾಧ್ಯಕ್ಷರುಗಳಾಗಿ ಸಿ.ಟಿ. ಕಷ್ಣಮೂರ್ತಿ ಮತ್ತು ಸಿದ್ದವ್ವನಹಳ್ಳಿ ಪರಮೇಶ್, ಕಾರ್ಯದರ್ಶಿಯಾಗಿ ಅನಿಸ್, ಸಂಘಟನಾ ಕಾರ್ಯದರ್ಶಿಯಾಗಿ ರವಿ ಮಲ್ಲಾಪುರ, ಸಹಕಾರ್ಯದರ್ಶಿಗಳಾಗಿ ಹೆಚ್.ಎಂ. ಮಂಜುನಾಥ್, ಮೆದೇಹಳ್ಳಿ ವಿಜಯಕುಮಾರ್, ಸಂಘಟಕರಾಗಿ ಮಹೇಶ್, ನಾಗರಾಜ್ ನಂದಿಪುರ, ಸಿರಾಜ್, ರಾಮನಾಯ್ಕ್ ಅವರುಗಳನ್ನು ನೇಮಿಸಲಾಗಿದೆ.

ಮಹಿಳಾ ಕ್ರೀಡಾಕೂಟದ ಅಧ್ಯಕ್ಷರಾಗಿ ಶ್ರೀಮತಿ ರುದ್ರಾಣಿ ಗಂಗಾಧರ್, ಉಪಾಧ್ಯಕ್ಷರಾಗಿ ಶ್ರೀಮತಿ ಮೋಕ್ಷರುದ್ರಸ್ವಾಮಿ, ಕಾರ್ಯದರ್ಶಿಯಾಗಿ ಶ್ರೀಮತಿ ಆರತಿ ಶಿವಮೂರ್ತಿಯಾಗಿ, ಖಜಾಂಚಿಯಾಗಿ ಶ್ರೀಮತಿ ಲತಾ ರಮೇಶ್ ಟಿ.ಕೆ. ಅವರನ್ನು ನೇಮಕ ಮಾಡಲಾಗಿದೆ ಎಂದು ಕ್ರೀಡಾಕೂಟದ ಅಧ್ಯಕ್ಷರಾದ ಶ್ರೀರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
bengaluruchitradurgaSharan samskruti FestivalSri Jayadeva Cup- 2024Sriramstate level kabaddi tournamentsuddionesuddione newsThree dayಚಿತ್ರದುರ್ಗಬೆಂಗಳೂರುಮೂರು ದಿನರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಶರಣ ಸಂಸ್ಕೃತಿ ಉತ್ಸವಶ್ರೀ ಜಯದೇವ ಕಪ್- 2024ಶ್ರೀರಾಮ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article