For the best experience, open
https://m.suddione.com
on your mobile browser.
Advertisement

ಸರಳ, ಸಜ್ಜನ, ಅನುಭವಿ ರಾಜಕಾರಣಿ ಗೋವಿಂದ ಕಾರಜೋಳ ಅವರನ್ನು ಜಿಲ್ಲೆಯ ಜನ ಗೆಲ್ಲಿಸುತ್ತಾರೆ : ಬಿ.ವೈ. ವಿಜಯೇಂದ್ರ

06:51 PM Apr 04, 2024 IST | suddionenews
ಸರಳ  ಸಜ್ಜನ  ಅನುಭವಿ ರಾಜಕಾರಣಿ ಗೋವಿಂದ ಕಾರಜೋಳ ಅವರನ್ನು ಜಿಲ್ಲೆಯ ಜನ ಗೆಲ್ಲಿಸುತ್ತಾರೆ   ಬಿ ವೈ  ವಿಜಯೇಂದ್ರ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ, ಏ.04 : ಲೋಕಸಭೆ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಬಹಳ ಸರಳ, ಸಜ್ಜನ, ಪ್ರಾಮಾಣಿಕ, ಅನುಭವ ರಾಜಕಾರಣಿ ಇಂತಹ ಅಭ್ಯರ್ಥಿಯನ್ನು ಜಿಲ್ಲೆಯ ಜನ ಗೆಲ್ಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು.

Advertisement
Advertisement

ಇಂದು ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ, ನಾಮಪತ್ರ ಸಲ್ಲಿಸಲು ತೆರಳುವ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ನೀಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ದೇಶದ ಜನ ಮತ್ತೊಮ್ಮೆ ಮೋದಿಜಿ ಅವರನ್ನು ಪ್ರಧಾನಮಂತ್ರಿ ಮಾಡಲು ಉತ್ಸುಕರಾಗಿದ್ದಾರೆ.ಹೀಗಾಗಿ ಅವರ ಜೊತೆಯಲ್ಲಿ ಗೋವಿಂದ ಕಾರಜೋಳ ಅವರು ಸಹ ಗೆದ್ದು ಅವರ ಜೊತೆ ಇರಬೇಕೆಂದು ನಮ್ಮ ಅಭಿಲಾಷೆ ಎಂದರು. ಯಡಿಯೂರಪ್ಪ ರಾಜಕಾರಣ ಬಿಡುವವರೆಗೂ ನಾನು ಹೋರಾಟ ನಡೆಸುತ್ತೇನೆ ಎಂದು ಹೇಳಿಕೆ ನೀಡಿರುವ ಈಶ್ವರಪ್ಪ ಹೇಳಿಕೆಗೆ ಅದನ್ನೆಲ್ಲ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ನಯವಾಗಿ ಉತ್ತರಿಸಿರು.

ನಂತರ, ಲೋಕಸಭಾ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ,ಇಂದು ಉರಿ ಬಿಸಿಲನ್ನು ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ನಾಮಪತ್ರ ಸಲ್ಲಿಕೆಗೆ ಭಾಗವಹಿಸಿರುವುದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಅದೇ ರೀತಿ ಮುಂಬರುವ ದಿನಗಳಲ್ಲಿ, ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಬಿಜೆಪಿ ಪಕ್ಷದ ಆಡಳಿತದ ಬಗ್ಗೆ ತಿಳಿಸಿ ಅವರಿಗೆ ಬಿಜೆಪಿಗೆ ಮತ ಚಲಾಯಿಸುವಂತೆ ಮನವಿ ಮಾಡಬೇಕೆಂದು ಬಿಜೆಪಿ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ತಿಳಿಸಿದರು.

ಇದೇ ವೇಳೆ ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ವಿಧಾನಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್, ಶಾಸಕರಾದ ಎಂ ಚಂದ್ರಪ್ಪ, ಗಾಲಿ ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಮಾಜಿ ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ಎಸ್ ಕೆ ಬಸವರಾಜನ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ವೈ.ಎ ನಾರಾಯಣಸ್ವಾಮಿ, ಚಿದಾನಂದ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಹನುಮಂತೆ ಗೌಡ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಮಾಜಿ ಸಂಸದರಾದ ಜನಾರ್ಧನಸ್ವಾಮಿ, ಜೆಡಿಎಸ್ ಮುಖಂಡರಾದ ಕಾಂತರಾಜ್, ಯಶೋಧರ್, ರವೀಶ್, ರವೀಂದ್ರ, ತಿಪ್ಪೇಸ್ವಾಮಿ, ಮುಂತಾದ ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾ ಹಾಗು ರಾಜ್ಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Tags :
Advertisement