Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ 25 ರಂದು ಬೈಕ್ ರ‌್ಯಾಲಿ : 26 ರಂದು ಶ್ರೀ ಕೃಷ್ಣಜನ್ಮಾಷ್ಟಮಿ : ಸಿ.ಟಿ.ಕೃಷ್ಣಮೂರ್ತಿ

05:54 PM Aug 18, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.18  : ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀಕೃಷ್ಣ ಯಾದವಾನಂದ ಮಠದ ಹತ್ತಿರವಿರುವ ಕೃಷ್ಣ ವೃತ್ತದಲ್ಲಿ ಆಗಸ್ಟ್ 26 ರಂದು ಶ್ರೀ ಕೃಷ್ಣಜನ್ಮಾಷ್ಟಮಿ ನಡೆಯಲಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ತಿಳಿಸಿದರು.

Advertisement

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಗಸ್ಟ್ 25 ರಂದು ಬೆಳಿಗ್ಗೆ 11 ಕ್ಕೆ ಕೃಷ್ಣ ವೃತ್ತದಿಂದ ಬೈಕ್ ರ‌್ಯಾಲಿ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. 26 ರಂದು ಬೆಳಿಗ್ಗೆ ಐದು ಗಂಟೆಯಿಂದಲೆ ಪೂಜೆ ವಿವಿಧ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಸ್ಥಳೀಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಯಾದವ ಸಮಾಜದ ಮುಖಂಡರುಗಳು ಹಾಗೂ ಜಿಲ್ಲಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕೇವಲ ಯಾದವ ಜನಾಂಗವಷ್ಟೆ ಅಲ್ಲ ಎಲ್ಲಾ ಜಾತಿಯವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಸಿ.ಟಿ.ಕೃಷ್ಣಮೂರ್ತಿ ಮನವಿ ಮಾಡಿದರು.

ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ಅಧ್ಯಕ್ಷ ಕದರಪ್ಪ, ಆರ್.ಶಿವಣ್ಣ, ಗರಡಿ ತಿಮ್ಮಣ್ಣ, ಮೈಲಾರಪ್ಪ, ನಗರಸಭೆ ಮಾಜಿ ಸದಸ್ಯ ಡಿ.ಸಿ.ಸುರೇಶ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Advertisement
Tags :
bengaluruBike rallychitradurgaCT Krishna MurthySri Krishnajanmashtamisuddionesuddione newsಚಿತ್ರದುರ್ಗಬೆಂಗಳೂರುಬೈಕ್ ರ್ಯಾಲಿಶ್ರೀ ಕೃಷ್ಣಜನ್ಮಾಷ್ಟಮಿಸಿ.ಟಿ.ಕೃಷ್ಣಮೂರ್ತಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article