For the best experience, open
https://m.suddione.com
on your mobile browser.
Advertisement

ಮಲ್ಲಾಡಿಹಳ್ಳಿಯಲ್ಲಿ ಮಾ.10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಮಟ್ಟದ ಸರ್ವ ಸದಸ್ಯರ ಸಭೆ

07:45 PM Mar 08, 2024 IST | suddionenews
ಮಲ್ಲಾಡಿಹಳ್ಳಿಯಲ್ಲಿ ಮಾ 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಮಟ್ಟದ ಸರ್ವ ಸದಸ್ಯರ ಸಭೆ
Advertisement

ಸುದ್ದಿಒನ್, ಚಳ್ಳಕೆರೆ, ಮಾರ್ಚ್.08 : ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಮಾ.10 ಭಾನುವಾರದಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿಟಿ ವೀರಭದ್ರ ಸ್ವಾಮಿ ತಿಳಿಸಿದರು.

Advertisement
Advertisement

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಅಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಪರಿಷತ್ತಿನ ಸರ್ವ ಸದಸ್ಯರು ಆಗಮಿಸಲಿದ್ದು ತಾಲೂಕಿನಲ್ಲಿಪರಿಷತ್ತಿನ ಆಜೀವ ಸದಸ್ಯತ್ವ ಪಡೆದ ಸದಸ್ಯರು ಸಭೆಗೆ ಹಾಜರಾಗಲು ಇಚ್ಚಿಸಿದ್ದಲ್ಲಿ ತಾಲೂಕು ಕಸಪ್ಪ ವತಿಯಿಂದ ವಾಹನವನ್ನು ಏರ್ಪಡಿಸಲು ತೀರ್ಮಾನಿಸಿದ್ದು ಶನಿವಾರದೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಲ್ಲಿ ಕಳುಹಿಸಿಕೊಡುವ ಏರ್ಪಾಡು ಮಾಡಲಾಗುವುದು ಎಂದು ತಿಳಿಸಿದರು ಹೆಚ್ಚಿನ ಮಾಹಿತಿಗಾಗಿ ಕಸಾಪ ಅಧ್ಯಕ್ಷರಾದ ಜಿ ಟಿ ವೀರಭದ್ರ ಸ್ವಾಮಿಯವರ ದೂರವಾಣಿ ಸಂಖ್ಯೆ 8050311363ಗೆ ಸಂಪರ್ಕಿಸಲು ಕೋರಿದ್ದಾರೆ.

Advertisement

ಇದೇ ಸಂದರ್ಭದಲ್ಲಿ ಶಾಸಕ ಟಿ ರಘುಮೂರ್ತಿಯವರಿಗೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಅನುದಾನಿತ ಶಾಲೆಗಳ ನೌಕರರ ಸಂಘ ವತಿಯಿಂದ ಶನಿವಾರ 11:00 ಗಂಟೆಗೆ ರೋಟರಿ ಬಾಲ ಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ದಯಾನಂದ ಡಿ ಈರಣ್ಣ ಶಿವಮೂರ್ತಿ ಉಪಸ್ಥಿತರಿದ್ದರು.

Advertisement
Advertisement

Advertisement
Tags :
Advertisement