For the best experience, open
https://m.suddione.com
on your mobile browser.
Advertisement

ಆಗಸ್ಟ್ 03 ರಂದು ಚಿತ್ರದುರ್ಗ ರೆಡ್ಡಿ ಜನಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

04:50 PM Aug 01, 2024 IST | suddionenews
ಆಗಸ್ಟ್ 03 ರಂದು ಚಿತ್ರದುರ್ಗ ರೆಡ್ಡಿ ಜನಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Advertisement

ಸುದ್ದಿಒನ್, ಚಿತ್ರದುರ್ಗ: ಆಗಸ್ಟ್.01 : ಚಿತ್ರದುರ್ಗ ರೆಡ್ಡಿ ಜನಸಂಘದ ವತಿಯಿಂದ ಆಗಸ್ಟ್ 3 ನೇ ತಾರೀಖಿನ  ಶನಿವಾರ ಮಧ್ಯಾಹ್ನ 12:00 ಗಂಟೆಗೆ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Advertisement
Advertisement

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇ 85% ಕ್ಕಿಂತ ಮೇಲ್ಪಟ್ಟ ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ಅಭಿನಂದನಾ ಕಾರ್ಯಕ್ರಮ : ದೇಶ ಸೇವೆಯ ಕರ್ತವ್ಯದಲ್ಲಿ ತೊಡಗಿಸಿಕೊಂಡು ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೈನಿಕರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು

Advertisement

ದಿನಾಂಕ : 01-04-2023 ರಿಂದ 31-07-2024 ರವರೆಗೆ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ರಾಷ್ಟ್ರಮಟ್ಟದ ವಿಶೇಷ ಪ್ರಶಸ್ತಿಗೆ ಭಾಜನರಾದ ಸಮುದಾಯದ ಅಧಿಕಾರಿಗಳು ಮತ್ತು ನೌಕರರಿಗೆ ಅಭಿನಂದನಾ ಏರ್ಪಡಿಸಲಾಗಿದೆ.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಡ್ಡಿ ಜನಸಂಘದ ಅಧ್ಯಕ್ಷರೂ ಹಾಗೂ ಮಾಜಿ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ ವಹಿಸುವರು.

ಈ ಕಾರ್ಯಕ್ರಮದಲ್ಲಿ ರೆಡ್ಡಿ ಜನಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಸಮುದಾಯದ ಮುಖಂಡರು, ವಿದ್ಯಾರ್ಥಿಗಳ ಪೋಷಕರು, ಮಾಜಿ ಸೈನಿಕರ ಮತು ನೌಕರರ ಕುಟುಂಬವರ್ಗದವರು ಭಾಗವಹಿಸಲಿದ್ದಾರೆ‌ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
Advertisement