For the best experience, open
https://m.suddione.com
on your mobile browser.
Advertisement

ಹಿರಿಯೂರಿನಲ್ಲಿ ಸಚಿವ ಬೈರತಿ ಸುರೇಶ್ ಪ್ರಮಾಣಿಸುತಿದ್ದ  ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

01:17 PM Dec 24, 2023 IST | suddionenews
ಹಿರಿಯೂರಿನಲ್ಲಿ ಸಚಿವ ಬೈರತಿ ಸುರೇಶ್ ಪ್ರಮಾಣಿಸುತಿದ್ದ  ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Advertisement

ಸುದ್ದಿಒನ್, ಹಿರಿಯೂರು, ಡಿಸೆಂಬರ್. 24 : ಸಚಿವ ಬೈರತಿ ಸುರೇಶ್ ಪ್ರಮಾಣಿಸುತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಹಿರಿಯೂರಿನ ಬಳಿ  ತುರ್ತು ಭೂಸ್ಪರ್ಶ ಆದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

Advertisement
Advertisement

ತಾಲೂಕಿನ ಆರನಕಟ್ಟಿ ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ಇಂದು (ಭಾನುವಾರ) ಬೆಳಿಗ್ಗೆ 11:30 ರ ಸಮಯಕ್ಕೆ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿದೆ.

Advertisement

ಸಚಿವ ಭೈರತಿ ಸುರೇಶ್ ಅವರು ಬೆಂಗಳೂರಿನಿಂದ ಗದಗ ಜಿಲ್ಲೆಯ ಸಂಕೇಶ್ವರ ಕಡೆಗೆ ಕಾರ್ಯಕ್ರಮ ನಿಮಿತ್ತ ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆ ಕಾರಣ ಅಲ್ಲಿಂದ ಕಾರಿನ ಮೂಲಕ ಸಂಕೇಶ್ವರ ಕಡೆಗೆ ತೆರಳಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಹಾಗೂ ದುರ್ಘಟನೆ ಸಂಭವಿಸಿಲ್ಲ. ಹೆಲಿಕ್ಯಾಪ್ಟರ್ ನೋಡಲು ಗ್ರಾಮದ ಸುತ್ತಮುತ್ತಲಿನ ಜನರು ಬಂದು ವೀಕ್ಷಣೆ ಮಾಡಿದರು.

Advertisement
Tags :
Advertisement