Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 23 ರಂದು ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮತ್ತೆ ಮುಂದೂಡಿಕೆ : ಬಿ.ಟಿ.ಜಗದೀಶ್

05:27 PM Oct 21, 2024 IST | suddionenews
Advertisement

 

Advertisement

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ. ಅಕ್ಟೋಬರ್. 21 : ಅ. 23 ರಂದು ನಡೆಯಬೇಕಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಮಳೆ ಮತ್ತು ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಮುಂದೂಡಲಾಗಿದೆ ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕರಾದ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಶಾಶ್ವತ ಹಿಂದುಳಿದ ವರ್ಗಗಗಳ ಕಾಂತರಾಜ್ ನೇತೃತ್ವದ ಆಯೋಗ ಸಿದ್ದಪಡಿಸಿದ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಹವಾಮಾನ ಇಲಾಖೆಯ ವರದಿಯಂತೆ, ಮಳೆ ಮುಂದುವರೆಯಲಿರುವ ಕಾರಣ ಮತ್ತು ರಾಜ್ಯದಲ್ಲಿ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆ ಮಾಡಿದ್ದು ಚುನಾವಣೆ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಆಗದೇ ಇರುವ ಕಾರಣ ಹಾಗೂ ನೀತಿ ಸಂಹಿತೆ ಜಾರಿಯಿಂದ ನಮ್ಮ ಸಮಾವೇಶಕ್ಕೂ ಕೆಲವು ಅಡ್ಡಿ ಆತಂಕ ಗಳಿರುವ ಕಾರಣದಿಂದ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ದಿನಾಂಕ 23/10/2024 ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿ ಪಡಿಸಿದ ನಂತರ ಎಲ್ಲರ ಗಮನಕ್ಕೆ ತರಲಾಗುವುದು ಎಂದು ಬಿ.ಟಿ. ಜಗದೀಶ್ ಮನವಿ ಮಾಡಿದ್ದಾರೆ.

Advertisement
Tags :
bangalorebengaluruBT JagadishchitradurgaConferenceFreedom ParkScheduledsuddionesuddione newsಚಿತ್ರದುರ್ಗಫ್ರೀಡಂ ಪಾರ್ಕ್ಬಿ.ಟಿ.ಜಗದೀಶ್ಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹಕ್ಕೊತ್ತಾಯ ಸಮಾವೇಶ
Advertisement
Next Article