For the best experience, open
https://m.suddione.com
on your mobile browser.
Advertisement

ನಾಳೆ ಚಿತ್ರದುರ್ಗ ಮತ್ತು ದಾವಣಗೆರೆಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ

03:43 PM Feb 08, 2024 IST | suddionenews
ನಾಳೆ ಚಿತ್ರದುರ್ಗ ಮತ್ತು ದಾವಣಗೆರೆಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ
Advertisement

Advertisement
Advertisement

ಸುದ್ದಿಒನ್, ಚಿತ್ರದುರ್ಗ ಫೆ. 08 : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆ. 09 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Advertisement

ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ಗಂಟೆಗೆ ಬೆಂಗಳೂರಿನಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕು ಬ್ರಹ್ಮವಿದ್ಯಾನಗರ ಸುಕ್ಷೇತ್ರ ಆವರಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು.

Advertisement

ನಂತರ ಇಲ್ಲಿನ ಭಗೀರಥ ಪೀಠ ಮಹಾಸಂಸ್ಥಾನ ಮಠದ ವತಿಯಿಂದ ಆಯೋಜಿಸಿರುವ ಜಗದ್ಗುರು ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ 25 ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಹಾಗೂ ರಾಷ್ಟ್ರೀಯ ಭಗೀರಥ ಜಯಂತ್ಯೋತ್ಸವ ಮತ್ತು ಉಪ್ಪಾರರ ಬೃಹತ್ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 01 ಗಂಟೆಗೆ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Advertisement
Tags :
Advertisement