Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನಾಳೆ ಡಾ. ಕೆ. ವಿ. ಸಂತೋಷ್ ಅವರ "ಚಿತ್ರದುರ್ಗ ತಾಲ್ಲೂಕು ದರ್ಶನ" ಪುಸ್ತಕ ಬಿಡುಗಡೆ

07:48 PM Jul 31, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ.31 : ನಗರದ ಖ್ಯಾತ ವೈದ್ಯ ಡಾ. ಕೆ. ವಿ. ಸಂತೋಷ್ ಅವರು ರಚಿಸಿರುವ "ಚಿತ್ರದುರ್ಗ ತಾಲ್ಲೂಕು ದರ್ಶನ" ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕದ ಪದಗ್ರಹಣ ಸಮಾರಂಭ ಆಗಸ್ಟ್ 01 ರ ಇಂದು ಬೆಳಿಗ್ಗೆ 30 ಕ್ಕೆ ಪತ್ರಕರ್ತರ ಭವನದಲ್ಲಿ ನಡೆಯಲಿದೆ.

Advertisement

ಹೊಸದುರ್ಗ ಬ್ರಹ್ಮವಿದ್ಯಾನಗರ ಭಗೀರಥ ಪೀಠದ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರು ಹಾಗೂ ಸದಸ್ಯರು ಐ.ಸಿ.ಸಿ.ಆರ್ ಭಾರತ ಸರ್ಕಾರ ಡಾ.ಜನಪದ ಎಸ್.ಬಾಲಾಜಿ ಇವರು ಸಮಾರಂಭ ಉದ್ಘಾಟಿಸಲಿದ್ದಾರೆ.

Advertisement

ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಚಿತ್ರದುರ್ಗ ತಾಲ್ಲೂಕು ದರ್ಶನ ಪುಸ್ತಕ ಬಿಡುಗಡೆಗೊಳಿಸುವರು. ಲೇಖಕರು ಹಾಗೂ ದಂತ ವೈದ್ಯ ಡಾ.ಕೆ.ವಿ.ಸಂತೋಷ್, ಚಿಕ್ಕಮಗಳೂರು ಕ.ಸಾ.ಪ. ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಇವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಕನ್ನಡ ಜನಪದ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷ ಡಾ.ಬಾ.ಮೈಲಾರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆಂದು ಕನ್ನಡ ಜಾನಪದ ಪರಿಷತ್ ಕಾರ್ಯದರ್ಶಿ ಹುರುಳಿ ಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
bengalurubook releasechitradurgaChitradurga Taluk Darshandr k v. Santhoshsuddionesuddione newstomorrowಚಿತ್ರದುರ್ಗಚಿತ್ರದುರ್ಗ ತಾಲ್ಲೂಕು ದರ್ಶನಡಾ ಕೆ. ವಿ. ಸಂತೋಷ್‌ಪುಸ್ತಕ ಬಿಡುಗಡೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article