For the best experience, open
https://m.suddione.com
on your mobile browser.
Advertisement

ದಾವಣಗೆರೆ |  ನಿಕಟಪೂರ್ವ ಜಿಲ್ಲಾಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ, ನೂತನ ಜಿಲ್ಲಾಧಿಕಾರಿಗೆ ಸ್ವಾಗತ

08:59 PM Jul 10, 2024 IST | suddionenews
ದಾವಣಗೆರೆ    ನಿಕಟಪೂರ್ವ ಜಿಲ್ಲಾಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ  ನೂತನ ಜಿಲ್ಲಾಧಿಕಾರಿಗೆ ಸ್ವಾಗತ
Advertisement

ದಾವಣಗೆರೆ, ಜುಲೈ.10 :  ಕಳೆದೊಂದು ವರ್ಷದಿಂದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದ ಡಾ. ವೆಂಕಟೇಶ್ ಎಂ.ವಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮತ್ತು ನೂತನವಾಗಿ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಜಿ.ಎಂ. ಗಂಗಾಧರಸ್ವಾಮಿಯವರಿಗೆ ಸ್ವಾಗತ ಮಾಡಲಾಯಿತು.

Advertisement
Advertisement

ಜುಲೈ10 ರಂದು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬೀಳ್ಕೊಡುಗೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ವಿವಿಧ ಇಲಾಖೆ, ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರು ಅಧಿಕಾರಿಗಳೊಂದಿಗೆ ತಂಡದ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಅನೇಕ ವರ್ಷಗಳಿಂದ ಬಗೆಹರಿಯದೆ ಇದ್ದ ಮತ್ತು ಜಟಿಲವಾದ ಸಮಸ್ಯೆಗಳನ್ನು ಇತ್ಯರ್ಥ ಮಾಡಲಾಯಿತು. ಇದಕ್ಕೆ ಬೇಕಾದ ಎಲ್ಲಾ ಸಹಕಾರ ಜನಪ್ರತಿನಿಧಿಗಳಿಂದ ಸಿಕ್ಕಿದ್ದರಿಂದ ಅಲ್ಪ ಅವಧಿಯಲ್ಲಿ ಗುರುತರವಾದ ಕೆಲಸ ಮಾಡಲು ಸಾಧ್ಯವಾಗಿತು.

Advertisement

ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವಾಗ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ರೈತರು, ಸಂಘ, ಸಂಸ್ಥೆಯವರ ವಿಶ್ವಾಸ ಪಡೆದು ಮಾಡಿದಾಗ ನಾವು ಮಾಡುವ ಕೆಲಸ ಸಂಪೂರ್ಣವಾಗಿ ಯಶಸ್ವಿಯಾಗಲು ಸಾಧ್ಯ, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಜನಸ್ಪಂದನ ಕಾರ್ಯಕ್ರಮದಲ್ಲಿ ಅನೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಮಾಡಿ ಜನಮಾನಸದಲ್ಲಿ ಉಳಿಯುವಂತೆ ಮಾಡಲಾಗಿದೆ ಎಂದು ತಮ್ಮ ಅವಧಿಯಲ್ಲಾದ ಅತ್ಯುತ್ತಮ ಕೆಲಸಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಎಲ್ಲಾ ಇಲಾಖೆ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದರಿಂದ ದಾವಣಗೆರೆ ಜಿಲ್ಲೆ ಹಲವು ಪ್ರಗತಿಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಅದು ಲ್ಯಾಂಡ್‍ಬೀಟ್, ಪಹಣಿಗೆ ಆಧಾರ್ ಜೋಡಣೆ ಸೇರಿದಂತೆ ರಾಜ್ಯದಲ್ಲಿ ಗುರುತಿಸಿಕೊಂಡ ಜಿಲ್ಲೆಯಾಗಿದೆ ಎಂದರು.
ನೂತನ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲರ ಸಹಕಾರ, ಎಲ್ಲರೊಟ್ಟಿಗೆ ಸೇರಿ ಜಿಲ್ಲೆಯ ಅಭಿವೃದ್ದಿ ಮಾಡೋಣ, ಸಮಸ್ಯೆ ಬರುತ್ತವೆ, ಬಂದ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿಯೇ ಅಧಿಕಾರಿ ವರ್ಗ ಇರುವುದು, ತಂಡವಾಗಿ ಕೆಲಸ ಮಾಡೋಣ ಎಂದರು.

Advertisement

ಅನೇಕ ಹಿಂದಿನ ಜಿಲ್ಲಾಧಿಕಾರಿಗಳ ತಮ್ಮ ಸೇವಾ ಅವಧಿಯಲ್ಲಿ ಮಾಡಿದ ಕೆಲಸಗಳು, ಆಡಳಿತಾತ್ಮಕ ಅನುಭವಗಳ ಸಂಗ್ರಹವನ್ನು ಪುಸ್ತಕದ ರೂಪದಲ್ಲಿ ತಂದಿದ್ದಾರೆ. ಅಂತಹ ಪುಸ್ತಕಗಳನ್ನು ಓದುವ ಮೂಲಕ ಜನರ ಸೇವೆಯನ್ನು ಯಾವ ರೀತಿ ಹೊಸ ಉದ್ದೇಶದಿಂದ ಕೆಲಸ ಮಾಡಬಹುದೆಂದು ಎಲ್ಲರ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದ ಅವರು ಆಡಳಿತಾತ್ಮಕ ವಿಷಯಗಳಲ್ಲಿ ಕಠಿಣತೆಯು ಇರುತ್ತದೆ, ಕೆಲಸ ಮಾಡಿದವರ ಮೇಲೆ ಸರಳತೆಯು ಇರುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ನ್ಯಾಯಮೂರ್ತಿಗಳಾದ ಸುಭಾಷ್ ಬಿ.ಆಡಿ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ಪಾಲಿಕೆ ಆಯುಕ್ತರಾದ ರೇಣುಕಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ಅಭಿಷೇಕ್ ವಿ, ನಿಕಟ ಪೂರ್ವ ಹಾಗೂ ನೂತನ ಜಿಲ್ಲಾಧಿಕಾರಿಯವರ ಶ್ರೀಮತಿಯವರು, ಕುಟುಂಬ ವರ್ಗ ಹಾಗೂ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags :
Advertisement