Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆ ಬಡಾವಣೆ ಪೊಲೀಸರಿಂದ ಕೆ ಎಸ್ ಈಶ್ವರಪ್ಪಗೆ ನೋಟೋಸ್ ಜಾರಿ..!

01:06 PM Feb 10, 2024 IST | suddionenews
Advertisement

ದಾವಣಗೆರೆ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇತ್ತಿಚೆಗೆ ಕಾಂಗ್ರೆಸ್ ನಾಯಕರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಇದೀಗ ಆ ಹೇಳಿಕೆಗೆ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ.

Advertisement

ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅಂತವರನ್ನು ಗುಂಡಿಟ್ಟು ಕೊಲ್ಲಬೇಕೆಂಬ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರಂ ನಗರದಲ್ಲಿರುವ ಕೆ ಎಸ್ ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಪೊಲೀಸರು, ನೋಟೀಸ್ ಜಾರಿ ಮಾಡಿದ್ದಾರೆ. ಕೆ ಎಸ್ ಈಶ್ವರಪ್ಪ ಅವರು ಕೂಡ ನೋಟೀಸ್ ತೆಗೆದುಕೊಂಡಿದ್ದಾರೆ.

 

Advertisement

19/2024 ಅಪರಾಧ ಸಂಖ್ಯೆಗೆ ಸಂಬಂಧಿಸಿದಂತೆ ನೋಟೀಸ್ ಜಾರಿಯಾಗಿದೆ. ಈ ನೋಟೀಸ್ ನಲ್ಲಿ ಫೆಬ್ರವರಿ 15ರಂದು ಬೆಳಗ್ಗೆ 10.30ಕ್ಕೆ ಠಾಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ. ಪ್ರಕರಣದ ಕೆಲಸವು ಸತ್ಯಾಂಶ ಹಾಗೂ ಸನ್ನಿವೇಶಗಳನ್ನು ಖಚಿತಪಡಿಸಬೇಕಿದೆ. ಪ್ರಕರಣದಲ್ಲಿ ವಿಚಾರಣೆ ಮಾಡಲು ಸಾಕಷ್ಟು ಪೂರಕ ಕಾರಣಗಳು ಕಂಡು ಬಂದಿದೆ ಎಂದು ನೋಟೀಸ್ ಜಾರಿ‌ಮಾಡಲಾಗಿದೆ.

Advertisement
Tags :
davanagereks eshwarappaಕೆ ಎಸ್ ಈಶ್ವರಪ್ಪದಾವಣಗೆರೆನೋಟೋಸ್ ಜಾರಿಬಡಾವಣೆ ಪೊಲೀಸ
Advertisement
Next Article