For the best experience, open
https://m.suddione.com
on your mobile browser.
Advertisement

ಗೌರವ ಮರ್ಯಾದೆ ಇಲ್ಲದೆ ಬೇಸತ್ತು ನಮ್ಮ ಪಕ್ಷಕ್ಕೆ ಬಂದಿದ್ದಾರೆ : ಸಚಿವ ಮಲ್ಲಿಕಾರ್ಜುನ್

12:30 PM Apr 22, 2024 IST | suddionenews
ಗೌರವ ಮರ್ಯಾದೆ ಇಲ್ಲದೆ ಬೇಸತ್ತು ನಮ್ಮ ಪಕ್ಷಕ್ಕೆ ಬಂದಿದ್ದಾರೆ   ಸಚಿವ ಮಲ್ಲಿಕಾರ್ಜುನ್
Advertisement

ದಾವಣಗೆರೆ: ಸಂಸದರಾಗಿ ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಮೋದಿ ಫೋಟೋ ಇಟ್ಟುಕೊಂಡು ತೋರಿಸುತ್ತಾರೆ ವೈಯಕ್ತಿಕವಾಗಿ ಅಭಿವೃದ್ಧಿ ಶೂನ್ಯ ಎಂದು ಸಂಸದರ ಸಿದ್ದೇಶ್ವರ್ ವಿರುದ್ಧ ಸಚಿವ ಮಲ್ಲಿಕಾರ್ಜುನ್ ಗರಂ ಆಗಿದ್ದಾರೆ.

Advertisement
Advertisement

Advertisement

ದಾವಣಗೆರೆಯಲ್ಲಿ ಸಚಿವ ಮಲ್ಲಿಕಾರ್ಜುನ್ ಪ್ರತಿಕ್ರಿಯೆ ನೀಡಿದ್ದು, ಜನರ ಒಲವು ಕಾಂಗ್ರೆಸ್ ಪರ ಇದೆ. ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಬಡವರಿಗೆ ಮಹಿಳೆಯರಿಗೆ ಅನುಕೂಲ ಆಗಲಿದೆ. ಮಹಿಳೆಯರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ನಾವು ಕೆಲಸ ಮಾಡಿದ್ದೇವೆ ವೋಟ್ ಕೊಡಿ ಅಂತಾ ಕೇಳುತ್ತಿದ್ದೇವೆ. ನಮ್ಮ ಯೋಜನೆಗಳಿಂದ ಆರ್ಥಿಕವಾಗಿ ಜನರು ಸುಧಾರಣೆ ಆಗುತ್ತಾರೆ. ನಾವು ಯಾರನ್ನು ಆಪರೇಷನ್ ಮಾಡಿ ಪಕ್ಷಕ್ಕೆ ಕರ್ಕೊಂಡಿಲ್ಲ.

Advertisement
Advertisement

ಅವರ ದರ್ಪ ದೌಲತ್ತು ಬಿಡಬೇಕು. ಹಣದಿಂದ ಖರೀದಿ ಮಾಡಲು ಹೋದ್ರೆ ಇದೆ ತರಹ ಆಗೋದು. ಅವರಿಗೆ ಗೌರವ ಮರ್ಯಾದೆ ಇಲ್ಲದೆ ಬೇಸತ್ತು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಹಿರಿಯ ಮುಖಂಡರಿಗೂ ಅಸಮಾಧಾನ ಇದೆ. ಯಡಿಯೂರಪ್ಪ ಬಂದು ರಾಜೀ ಸಂಧಾನ ಮಾಡಿದ್ರು. ಜಾತಿಗೆ ಒಬ್ಬರಂತೆ ಮುಖಂಡರನ್ನು ಕರೆಸುತ್ತಿದ್ದಾರೆ. ವೈಯಕ್ತಿಕವಾಗಿ ಬೇಜಾರಾಗಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ.

ಸಂಸದರಾಗಿ ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಮೋದಿ ಫೋಟೋ ಇಟ್ಟುಕೊಂಡು ತೋರಿಸುತ್ತಾರೆ. ವೈಯಕ್ತಿಕವಾಗಿ ಅಭಿವೃದ್ಧಿ ಶೂನ್ಯ. ವೈಯಕ್ತಿಕವಾಗಿ ಈ ಮನುಷ್ಯ ಚೆoಬೆ. ನನ್ನ ಹೆಸರಿನಲ್ಲೂ ಹಿಂದೆ ನಾಮಪತ್ರ ಹಾಕಿಸಿದ್ದರು. ಯಾರೊ ವೈಯಕ್ತಿಕವಾಗಿ ನಾಮ ಪತ್ರ ಸಲ್ಲಿಸಿರಬಹುದು. ಕರೋನ ಸಮಯದಲ್ಲಿ ಜನರ ಪ್ರಾಣ ತೆಗೆದಿದ್ದಾರೆ ಮನುಷ್ಯತ್ವ ಇದೆಯಾ. ಹಿಂದೆ ಅವರ ಕಾಲದಲ್ಲಿ ಜಿಲ್ಲೆಯಲ್ಲಿ ಮಂತ್ರಿಗಳು ಆಗಲು ಬಿಡಲಿಲ್ಲ. ದುಡ್ಡಿನ ಭ್ರಮೆಯಲ್ಲಿ ಗೆಲ್ಲುತ್ತೆವೆ ಎಂದು ಕೊಂಡಿದ್ದಾರೆ ಜನರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಸಿದ್ದೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

Advertisement
Tags :
Advertisement