Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬೆಳಗ್ಗೆ ಹಲ್ಲುಜ್ಜಿದ ಬಳಿಕ ಹೀಗೆ ಮಾಡಿ.. ಆರೋಗ್ಯ ಲಾಭ ಪಡೆಯಿರಿ..!

07:25 AM Oct 16, 2021 IST | suddionenews
Advertisement

ಬೆಳಗ್ಗೆ ಎದ್ದ ತಕ್ಷಣ ಒಂದಷ್ಟು ಜನ ಟೀ ಕುಡೊಯೋ ಅಭ್ಯಾಸ ಮಾಡಿಕೊಂಡಿದ್ರೆ, ಇನ್ನೊಂದಷ್ಟು ಜನ ಯಾವ ಅಭ್ಯಾಸವನ್ನ ಮಾಡ್ಕೊಂಡಿಲ್ಲ. ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜಿದ ನಂತರ ಖಾಲಿ ಹೊಟ್ಟೆಯಲ್ಲಿ ಸ್ವಲ್ಪ ಕರಿಬೇವು ಹಾಗೂ ಅರ್ಧ ಚಮಚ ಜೀರಿಗೆಯನ್ನು ಸೇವಿಸುವುದರಿಂದ ಕೂದಲು ಉದುರುವುದು ಕಡಿಮೆ ಆಗುತ್ತದೆ, ದೃಷ್ಟಿ ದೋಷ ಸಮಸ್ಯೆಗೂ ಪರಿಹಾರ ನೀಡುತ್ತದೆ.

Advertisement

ಟೀ ಗೆ ಸ್ವಲ್ಪ ಶುಂಠಿ, ಏಲಕ್ಕಿ, ಒಂದು ಎಸಳು ಬೆಳುಳ್ಳಿ ಹಾಕಿ ಚೆನ್ನಾಗಿ ಕುದಿಸಿ ಕುಡಿದರೆ ತಲೆ ನೋವು ಕಡಿಮೆ ಮಾಡುತ್ತದೆ.

ನೆಲ್ಲಿಕಾಯಿ ಜ್ಯೂಸ್ ಗೆ ಮೆಂತೆ ಪುಡಿ ಹಾಕಿ ಪ್ರತಿದಿನವೂ ಕುಡಿಯುವುದರಿಂದ ಡಯಾಬಿಟಿಸ್ ಅನ್ನು ನಿಯಂತ್ರಣ ಸಾಧಿಸಲು ಆಗುತ್ತದೆ.

Advertisement

ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗೆಯುವುದರಿಂದ ದಂತಕ್ಷಯ ಹಾಗೂ ಬಾಯಿಯ ದುರ್ಗಂಧ ನಿವಾರಣೆಯಾಗುತ್ತದೆ.

ರಕ್ತಹೀನತೆಯಿಂದ ಬಳಲುತ್ತಿರುವವರು ದ್ರಾಕ್ಷಾರಸದೊಂದಿಗೆ ಸ್ವಲ್ಪ ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ರಕ್ತಹೀನತೆ ನಿವಾರಣೆಯಾಗುತ್ತದೆ.

ಹಾಲು, ಸಕ್ಕರೆ ಬೆರಸದೆ ತಣ್ಣಗಿರುವ ಹಾಲನ್ನು ಕುಡಿಯಿರಿ. ತಣ್ಣಗಿರುವ ಹಾಲು ದೇಹದಲ್ಲಿರುವ ಆಸಿಡ್ ಅಂಶಗಳನ್ನು ಹೀರಿಕೊಳ್ಳುತ್ತದೆ. ಗ್ಯಾಸ್ಟ್ರಿಕ್‌ ನಿಂದಾಗುವ ಉರಿಯನ್ನು ಶಮನಗೊಳಿಸುತ್ತದೆ.

ಪ್ರತಿದಿನ ಮೂಸಂಬಿ ಜ್ಯೂಸ್ ಕುಡಿಯುವುದರಿಂದ ಕಾಮಾಲೆ ರೋಗವನ್ನು ನಿವಾರಿಸುತ್ತದೆ ಹಾಗೂ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.

ಚಳಿ ಹೆಚ್ಚಿದ್ದಾಗ ಪುರುಷರು ಬಿಸಿ ನೀರಿನ ಸ್ನಾನ ಮಾಡಿದರೆ, ಹೃದಯಕ್ಕೆ ಸಂಬಂಧಿಸಿದ ಖಾಯಿಲೆಗಳು ಕಂಡು ಬರುತ್ತವೆ.

ಲೋಟ ಮೂಸಂಬಿ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ವಿಟಮಿನ್ ಸಿ ದೊರೆಯುವ ಮೂಲಕ ದೇಹಕ್ಕೆ ಪೋಷಣೆ ಲಭಿಸುತ್ತದೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಅಲ್ಸರ್ ಸಮಸ್ಯೆ ಇರುವವರು ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ, ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅದರ ಅಲ್ಸರ್ ತೊಂದರೆಯನ್ನು ಶಮನ ಮಾಡುತ್ತದೆ.

Advertisement
Tags :
featuredhealth tipshealth tips kannadakannada health tipsಆರೋಗ್ಯ ಮಾಹಿತಿಆರೋಗ್ಯ ಸಲಹೆ
Advertisement
Next Article