Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿಗೆ ಉಪ್ಪಾರ ಸಮಾಜದಿಂದ ಅಭಿನಂದನೆ

07:49 PM Jul 13, 2023 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, (ಜು.13) : ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿರವರಿಗೆ ಜಿಲ್ಲಾ ಉಪ್ಪಾರ ಸಮಾಜದಿಂದ ಹೂಗುಚ್ಚ ನೀಡಿ ಅಭಿನಂದಿಸಲಾಯಿತು.

ಜಿಲ್ಲಾ ಉಪ್ಪಾರ ಸಮಾಜದ ನಿಕಟಪೂರ್ವ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ ಈ ಹಿಂದೆ ಚಿತ್ರದುರ್ಗದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಲಸದ ನಿಮಿತ್ತ ಕಚೇರಿಗೆ ಬರುವವರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುತ್ತಿದ್ದರಿಂದ ಎಲ್ಲರ ಮನಸ್ಸಿನಲ್ಲಿ ಉಳಿದಿದ್ದೀರಿ. ಈಗ ಅಪರ ಜಿಲ್ಲಾಧಿಕಾರಿಯಾಗಿ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿ ಬಂದಿರುವುದು ನಮಗೆಲ್ಲಾ ಖುಷಿ ಕೊಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Advertisement

ಉಪ್ಪಾರ ಸಮಾಜದ ಹೆಚ್.ಅಜ್ಜಪ್ಪ ಮೆದೇಹಳ್ಳಿ, ನಿಕಟಪೂರ್ವ ಕಾರ್ಯದರ್ಶಿ ಬಸವರಾಜ್ ಹಂಪಯ್ಯನಮಾಳಿಗೆ, ಜಿಲ್ಲಾ ಉಪ್ಪಾರ ಸಮಾಜದ ಗೌರವಾಧ್ಯಕ್ಷ ನಿವೃತ್ತ ಡಿ.ವೈ.ಎಸ್ಪಿ. ಎಸ್.ನಾಗರಾಜ್, ಉದ್ಯಮಿ ಜಯಣ್ಣ, ಡಿ.ಎಸ್.ಎಸ್.ಮುಖಂಡ ಮಹಾಲಿಂಗಪ್ಪ ಕುಂಚಿಗನಹಾಳ್, ಪ್ರಹ್ಲಾದ್ ಈ ಸಂದರ್ಭದಲ್ಲಿ ಹಾಜರಿದ್ದು, ಅಪರ ಜಿಲ್ಲಾಧಿಕಾರಿಗೆ ಶುಭ ಹಾರೈಸಿದರು.

Advertisement
Tags :
Additional District CollectorchitradurgafeaturedKumaraswamysuddioneUppara Samajaಅಪರ ಜಿಲ್ಲಾಧಿಕಾರಿಅಭಿನಂದನೆ Congratulationsಉಪ್ಪಾರ ಸಮಾಜಕುಮಾರಸ್ವಾಮಿಚಿತ್ರದುರ್ಗಸುದ್ದಿಒನ್
Advertisement
Next Article