Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಾಕಿ ವೇತನ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಿ : ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಒತ್ತಾಯ

04:58 PM Feb 22, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.22 : ಮೂವತ್ತೆಂಟು ತಿಂಗಳ ಬಾಕಿ ವೇತನ ಹಾಗೂ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಗುರುವಾರ ಉಪವಾಸ ಧರಣಿ ಹಮ್ಮಿಕೊಳ್ಳಲಾಗಿತ್ತು.

Advertisement

ದಿನಾಂಕ : 1-1-2020 ರಿಂದ28-2-2023 ರವರೆಗಿನ ಶೇ.15 ರ ವೇತನ ಹೆಚ್ಚಳದ ಬಾಕಿ ಹಣ ಸಾರಿಗೆ ನೌಕರರಿಗೆ ಬರಬೇಕಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ಸಾರಿಗೆ ನಿಗಮಗಳ ಆಡಳಿತಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸದ ಕಾರಣ ಉಪವಾಸ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
1-1-2024 ರಿಂದ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಹೊಸ ವೇತನ ಪರಿಷ್ಕರಣೆಯಾಗಬೇಕು.

ಕೇಂದ್ರ ಸರ್ಕಾರ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಕ್ರೂರ ಶಿಕ್ಷೆ ವಿಧಿಸುವಂತ ಕಾನೂನು ತಿದ್ದುಪಡಿ ತಂದಿರುವುದರ ವಿರುದ್ದ ದೇಶಾದ್ಯಂತ ಚಾಲಕರ ಆಕ್ರೋಶ ಭುಗಿಲೆದ್ದಿದೆ. 1-1-2020 ರಿಂದ 28-2-2023 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ವೇತನ ಪರಿಷ್ಕರಣೆ ಅಳವಡಿಸಿ ಕೂಡಲೆ ನಿವೃತ್ತಿ ಸೌಲಭ್ಯಗಳ ಬಾಕಿ ಹಣ ನೀಡಬೇಕು. ಶಕ್ತಿ ಯೋಜನೆಯ ಸಂಪೂರ್ಣ ಅನುದಾನ ಕೂಡಲೆ ಪಾವತಿಯಾಗಬೇಕು. 1-1-2024 ರಿಂದ ಹೊಸ ವೇತನ ಜಾರಿಯಾಗಬೇಕು. 1-1-2020 ರಿಂದ ನಿವೃತ್ತಿಯಾದ ಮತ್ತು ಹೊರ ಹೋಗಿರುವ ನೌಕರರಿಗೆ ಹೊಸ ವೇತನ ಶ್ರೇಣಿ ಕೂಡಲೆ ಜಾರಿಯಾಗಬೇಕೆಂದು ಧರಣಿ ನಿರತರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಕಾಂತರಾಜ್, ಗೌರವಾಧ್ಯಕ್ಷ ರಹೀಂಸಾಬ್, ಪ್ರಧಾನ ಕಾರ್ಯದರ್ಶಿ ಟಿ.ಅಶೋಕ ಸೇರಿದಂತೆ ಪದಾಧಿಕಾರಿಗಳು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

Advertisement
Tags :
arrearsbengaluruchitradurgademanddemandsfulfillimportantsuddionesuddione newstrade unionstransport corporationswagesಒತ್ತಾಯಕಾರ್ಮಿಕ ಸಂಘಟನೆಗಳುಚಿತ್ರದುರ್ಗಪ್ರಮುಖ ಬೇಡಿಕೆಬಾಕಿ ವೇತನಬೆಂಗಳೂರುಸಾರಿಗೆ ನಿಗಮಗಳುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article