Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶ್ರೀರಾಮನವಮಿಯಂದು 40 ಲಕ್ಷ ಭಕ್ತರು : ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯಾ

05:20 AM Apr 16, 2024 IST | suddionenews
Advertisement

ಸುದ್ದಿಒನ್ : 500 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ನವಮಿ ಆಚರಣೆ ನಡೆಯುತ್ತಿದೆ. ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ಪ್ರಥಮ ಬಾರಿಗೆ ನಡೆಯುತ್ತಿರುವ ಶ್ರೀರಾಮ ಕಲ್ಯಾಣ ಮಹೋತ್ಸವವನ್ನು ಆಯೋಜಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ಸಕಲ ರೀತಿಯ ಸಿದ್ಧತೆ ನಡೆಸುತ್ತಿದ್ದಾರೆ.

Advertisement

ಅಯೋಧ್ಯೆಯ ಉದ್ಘಾಟನಾ ಸಮಾರಂಭದ ನಂತರ ಇದು ಮೊದಲ ಶ್ರೀರಾಮ ನವಮಿಯಾದ್ದರಿಂದ, ದೇಶಾದ್ಯಂತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಶ್ರೀರಾಮ ನವಮಿಯಂದು ಸುಮಾರು 40 ಲಕ್ಷ ಭಕ್ತರು ಅಯೋಧ್ಯೆಗೆ ಬರುತ್ತಾರೆ ಎಂದು ಟ್ರಸ್ಟ್ ಅಧಿಕಾರಿಗಳು ಅಂದಾಜಿಸಿದ್ದಾರೆ. ಇಡೀ ಅಯೋಧ್ಯಾ ನಗರವೇ ಈ ಸಂಭ್ರಮಾಚರಣೆಗೆ ಅಣಿಯಾಗುತ್ತದೆ.

रामचंद्र के भजन बिनु जो चह पद निर्बान।
ग्यानवंत अपि सो नर पसु बिनु पूँछ बिषान॥

Advertisement

श्री रामचंद्र जी के भजन बिना जो मोक्ष पद चाहता है, वह मनुष्य ज्ञानवान होने पर भी बिना पूँछ और सींग का पशु है। pic.twitter.com/5qDNmnC9ef

— Shri Ram Janmbhoomi Teerth Kshetra (@ShriRamTeerth) April 15, 2024

ಶ್ರೀರಾಮ ನವಮಿ ಆಚರಣೆಗಾಗಿ ಅಯೋಧ್ಯೆ ನಗರವನ್ನು ಸುಂದರವಾಗಿ ಅಲಂಕರಿಸಲಾಗುತ್ತಿದೆ. ದೇಶದೆಲ್ಲೆಡೆಯಿಂದ ಲಕ್ಷಾಂತರ ರಾಮಭಕ್ತರು ಆಗಮಿಸುವ ಸಾಧ್ಯತೆಯಿದ್ದು, ನೂಕುನುಗ್ಗಲು ಆಗಬಹುದು ಎಂಬ ವಿಷಯವನ್ನು ಗಮನದಲ್ಲಿಟ್ಟುಕೊಂಡು ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ಭಕ್ತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅಯೋಧ್ಯೆ ಬಾಲರಾಮನ ದರ್ಶನದ ಸಮಯವನ್ನು ಹೆಚ್ಚಿಸಲಾಗುವುದು. ಇಂದಿನಿಂದ (ಏಪ್ರಿಲ್ 16, 17 ಮತ್ತು 18 ರಂದು) 3 ದಿನಗಳ ಕಾಲ ದರ್ಶನ ಸಮಯವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ 3 ದಿನಗಳ ಕಾಲ ಭಕ್ತರಿಗೆ ದಿನಕ್ಕೆ 20 ಗಂಟೆಗಳ ಕಾಲ ಅಯೋಧ್ಯಾ ರಾಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯದ ಟ್ರಸ್ಟ್ ಅಧಿಕಾರಿಗಳು ಏಳು ಸಾಲುಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಿದ್ದಾರೆ.

एकटक सब सोहहिं चहुँ ओरा।
रामचन्द्र मुख चंद चकोरा॥
तरुन तमाल बरन तनु सोहा।
देखत कोटि मदन मनु मोहा॥ pic.twitter.com/GHKfqF4vGO

— Shri Ram Janmbhoomi Teerth Kshetra (@ShriRamTeerth) April 14, 2024

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದೇವಸ್ಥಾನದ ಅಧಿಕಾರಿಗಳು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ತಿಂಗಳ 15 ರಿಂದ 18 ರವರೆಗೆ ರಾಮಲಲ್ಲಾ ದರ್ಬಾರ್‌ನಲ್ಲಿ ವಿಐಪಿ ದರ್ಶನವನ್ನು ರದ್ದುಗೊಳಿಸಲಾಗಿದೆ. ನಾಲ್ಕು ದಿನಗಳ ಕಾಲ ವಿಐಪಿ ದರ್ಶನಕ್ಕೆ ವ್ಯವಸ್ಥೆ ಇರುವುದಿಲ್ಲ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಏಪ್ರಿಲ್ 15 ರಿಂದ 18ರವರೆಗೆ ನೀಡಿರುವ ವಿಐಪಿ ಪಾಸ್ ಗಳನ್ನು ರದ್ದು ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಚೈತ್ರ ಶುಕ್ಲ ಸಪ್ತಮಿ ಅಂದರೆ ಸೋಮವಾರದಿಂದ ಅಯೋಧ್ಯೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಿಐಪಿ ದರ್ಶನಕ್ಕೆ ಬ್ರೇಕ್ ಬಿದ್ದಿದೆ.

भगवान श्री रामलला सरकार के अलौकिक दर्शन - चैत्र शुक्ल षष्ठी, विक्रमी संवत २०८१

Divya Darshans of Bhagwan Shri Ramlalla Sarkar - Chaitra Shukla Shashthi, Vikrami Sanvat 2081 pic.twitter.com/zu0mavUYwJ

— Shri Ram Janmbhoomi Teerth Kshetra (@ShriRamTeerth) April 14, 2024

ಇಡೀ ಅಯೋಧ್ಯೆ ನಗರದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ಹನುಮಂತನಗರಿ ದೇಗುಲ ವಲಯ, ಕನಕಭವನ ಮಂದಿರ ವಲಯ, ಹೊಸ ಘಾಟ್ ವಲಯ, ನಾಗೇಶ್ವರನಾಥ ವಲಯ ಸೇರಿದಂತೆ ಎಲ್ಲ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 3 ದಿನಗಳ ಕಾಲ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಅಧಿಕಾರಿಗಳು ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಪೊಲೀಸ್, ಆರೋಗ್ಯ, ಮಹಾನಗರ ಪಾಲಿಕೆ ಮತ್ತು ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೂ ಎಚ್ಚರಿಕೆ ನೀಡಲಾಗಿದೆ. ಅಯೋಧ್ಯೆ ನಗರದಲ್ಲಿ ಪ್ರತಿ ಹಂತದಲ್ಲೂ ಸಿಸಿಟಿವಿಗಳನ್ನು ಅಳವಡಿಸಲಾಗುತ್ತಿದೆ.

Advertisement
Tags :
Ayodhyabengalurucelebratedchitradurgadecorateddevotees Sri Ram Navamigrandlysuddionesuddione newsಅಯೋಧ್ಯಾಚಿತ್ರದುರ್ಗಬೆಂಗಳೂರುಭಕ್ತರುಮದುವಣಗಿತ್ತಿಶ್ರೀರಾಮನವಮಿಸಿಂಗಾರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article