Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಗೀತಾ ಸೋಲಿನ ಬೆನ್ನಲ್ಲೇ ಕುಮಾರ ಬಂಗಾರಪ್ಪ ಪೋಸ್ಟ್ : ಶಿವರಾಜ್ ಕುಮಾರ್ ಬಗ್ಗೆಯೂ ವ್ಯಂಗ್ಯ..!

05:19 PM Jun 05, 2024 IST | suddionenews
Advertisement

ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಬಿವೈ ರಾಘವೇಂದ್ರ ವಿರುದ್ಧ ಸೋತಿದ್ದಾರೆ. ಈ ಸೋಲಿನ ಬಳಿಕ ಬಂಗಾರಪ್ಪ ಅವರ ಮಕ್ಕಳ ಶೀತಲ ಸಮರ ಮತ್ತೆ ಎಲ್ಲರೆದುರು ಹೊಗೆಯಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಅದು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪೋಸ್ಟ್ ಹಾಕಿದ್ದಾರೆ. ತಮ್ಮ ಜಗಳದಲ್ಲಿ ಇಲ್ಲಿ ಕುಮಾರ ಬಂಗಾರಪ್ಪ, ಶಿವರಾಜ್ ಕುಮಾರ್ ಅವರನ್ನು ಎಳೆದು ತಂದಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

Advertisement

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವ ರಾಜ್‍ಕುಮಾರ್ ಅವರು ಕಾಂಗ್ರೆಸ್ ನಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಈ ವೇಳೆ ಪತ್ನಿಯ ಪರವಾಗಿ ಶಿವಣ್ಣ ಪ್ರಚಾರ ಮಾಡಿದ್ದರು. ಪ್ರಚಾರದ ವೇಳೆ ಎಲ್ಲಿಯೂ ಇನ್ನೊಬ್ಬರ ವಿರೋಧ ಮಾತನಾಡಿರಲಿಲ್ಲ. ಕೇವಲ ತನ್ನ ಪತ್ನಿಗೆ ಒಂದು ಅವಕಾಶ ಕೊಡಿ ಎಂದಷ್ಟೇ ಕೇಳಿದ್ದರು. ಆದರೆ ಈಗ ಕುಮಾರ ಬಂಗಾರಪ್ಪ ಅವರು ಶಿವರಾಜ್ ಕುಮಾರ್ ಅವರ ಬಗ್ಗೆಯೂ ಲಘುವಾಗಿ ಮಾತನಾಡಿದ್ದಾರೆ. 'ಶಿವರಾಜ್ ಕುಮಾರ್ ಅವರು ನಿರುದ್ಯೋಗಿಯಾಗಬೇಕಿಲ್ಲ. ನಮ್ಮ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಬಹುದು' ಎಂದು ಪೋಸ್ಟ್ ಮಾಡಿದ್ದಾರೆ.

'ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಎನ್ನುವ ಮಾತುಗಳು ಏನಿದ್ದರೂ ಗಂಟಲೊಳಗರ , ನಾಲ್ಕು ಗೋಡೆಗಳ ಒಳಗೆ, ಪಟಾಲಂ ಮುಂದೆ ಮಾತ್ರ ಚಾಕ್ತಿಯಲ್ಲಿರಬೇಕು. ದಿಕ್ಕು ಕೆಟ್ಟು ದಿಕ್ಕಾಪಾಲಾಗಿ ಹೋಗಿ, ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವೂ ಹಿಂತುರುಗಿ ಬರುವುದು ಕನಸಿನ ಮಾತು' ಎಂದು ಸುಧೀರ್ಘವಾಗಿ ಬರೆದಿದ್ದಾರೆ.

Advertisement

Advertisement
Tags :
Geeta ShivrajkumarKumar bangarappashivarajkumarಕುಮಾರ ಬಂಗಾರಪ್ಪಗೀತಾಪೋಸ್ಟ್ವ್ಯಂಗ್ಯಶಿವರಾಜ್ ಕುಮಾರ್
Advertisement
Next Article