Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಖಜಾನೆಯಲ್ಲಿದ್ದ ಹಣವೆಲ್ಲ ಗ್ಯಾರಂಟಿ ಯೋಜನೆಗೆ ಹೋಗಿದೆ : ಬಿಎಸ್ ಯಡಿಯೂರಪ್ಪ ಗರಂ

12:43 PM Dec 13, 2023 IST | suddionenews
Advertisement

 

Advertisement

ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಈ ಸಂಬಂಧ ಬಿಎಸ್ವೈ ಪ್ರತಿಕ್ರಿಯೆ ನೀಡಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿರುವ ಸರ್ಕಾರವನ್ನು ಬಡಿದೆಬ್ಬಿಸಲು ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಖಜಾನೆಯಲ್ಲಿದ್ದ ಹಣವನ್ನೆಲ್ಲ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೇನೆ ಬಳಕೆ ಮಾಡಿಕೊಂಡಿದೆ. ಅವುಗಳನ್ನು ಅರ್ಧಂಬರ್ಧ ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣವಾಗಿ ನಿಂತು ಹೋಗಿವೆ‌. ಒಂದು ಕಿಲೋಮೀಟರ್ ನಷ್ಟು ರಸ್ತೆ ಮಾಡುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ. ಆಡಳಿತದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ದಿವಾಳಿಯಾಗಿರುವ ಸರ್ಕಾರವನ್ನು ಬಡಿದೆಬ್ಬಿಸಲು ಈ ಹೋರಾಟ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲು ಸುಮಾರು 20 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

Advertisement

ಬಿಜೆಪಿ ನಾಯಕರು ಪ್ರತಿಭಟನೆಯನ್ನು ಕಾಂಗ್ರೆಸ್ ನಾಯಕರು ವಿರೋಧಿಸಿದ್ದಾರೆ. ಏನೇ ಸಮಸ್ಯೆ ಇದ್ದರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಹೀಗೆ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

Advertisement
Tags :
guaranteescheme. BS Yeddyurappatreasuryಖಜಾನೆಗರಂಗ್ಯಾರಂಟಿ ಯೋಜನೆಬಿಎಸ್‌ ಯಡಿಯೂರಪ್ಪಬೆಂಗಳೂರುಸುದ್ದಿಒನ್ಹಣ
Advertisement
Next Article