For the best experience, open
https://m.suddione.com
on your mobile browser.
Advertisement

ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಿ : ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರ ಒತ್ತಾಯ

05:21 PM Apr 19, 2024 IST | suddionenews
ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಿ   ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರ ಒತ್ತಾಯ
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement
Advertisement

ಸುದ್ದಿಒನ್, ಚಿತ್ರದುರ್ಗ,ಏ.19 : ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಚಿತ್ರದುರ್ಗ ನಗರದ ಬಟ್ಟೆ ಅಂಗಡಿಯಲ್ಲಿ ಜೊತೆಯಲ್ಲೇ ಕೆಲಸ ಮಾಡುವ ಯುವತಿ ಒಬ್ಬಳನ್ನು ಮನೆಯ ಹತ್ತಿರ ಬಿಡಲು ಹೋದ ಸಂದರ್ಭದಲ್ಲಿ ಏಕಾಏಕಿ ಮುಸ್ಲಿಂ ಯುವಕರು ಹಿಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದರು.

Advertisement
Advertisement

ಕಳೆದ ಕೆಲವು ತಿಂಗಳಿಂದ ಜಿಹಾದಿ ಮಾನಸಿಕತೆಯ ಯುವಕರು ಮಿತಿಮೀರಿ ವರ್ತಿಸುತ್ತಿದ್ದು, ಬೆಂಗಳೂರಿನ ನಗರ ಪೇಟೆಯಲ್ಲಿ ಅನುಮಾನ್ ಚಾ ಲೀಸ ಹಾಕಿದ. ಮುಸಲ್ಮಾನ್ ಯುವಕರು ಮನಸೋಯಿಚ್ಚೆಯಂತೆ ಹಲ್ಲೆ ಮಾಡಿದ್ದಾರೆ. ಅದೆ ರೀತಿ ಬೆಂಗಳೂರಿನ ಬನಶಂಕರಿ ಭಾಗದಲ್ಲಿ ಮುಸ್ಲಿಂ ಯುವಕರು ಹಿಂದೂ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ. ಕಳೆದ 2 ದಿನಗಳ ಹಿಂದೆ ಚನ್ನಗಿರಿಯ ನಲ್ಲೂರಿನಲ್ಲಿ ರಾಮನವಮಿ ಆಚರಣೆ ಮಾಡುವ ಸಂದರ್ಭದಲ್ಲಿ ಜಿಹಾದಿಗಳು ಹಿಂದುಗಳ ಹಲ್ಲೆ ಮಾಡಿದ್ದಾರೆ.

ಅದೇ ರೀತಿ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಬಲೆಗೆ ಕಾರಣ ಹಿಂದೂ ಯುವತಿಯನ್ನ ಮುಸ್ಲಿಂ ಯುವಕನೊರ್ವ 9 ಬಾರಿ ಆಕೆಯನ್ನು ಹಿರಿದು ಕೊಂದಿದ್ದಾನೆ. ಮೊನ್ನೆ ಬೆಂಗಳೂರಿನಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಕಾರಣ ಪ್ರತಿಯಾಗಿ ಅಲ್ಲಾ ಹೂ ಅಕ್ಟರ್ ಎಂದು ಹೇಳಬೇಕೆಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ ಎಂದಿದ್ದಾರೆ.

ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದನ್ನು ಕಂಡು ಜಿಹಾದಿ ಮಾನಸಿಕತೆಯ ಯುವಕರನ್ನು 2 ದಿನಗಳಲ್ಲಿ ಬಂಧಿಸದಿದ್ದರೆ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಗ್ರಹಿಸುತ್ತದೆ.

ಈ ಸಂದರ್ಭದಲ್ಲಿ ಸರ್ದಾರ್ ಸೇವಾಲಾಲ್ ಶ್ರೀಗಳು, ವಿಶ್ವ ಹಿಂದು ಪರಿಷತ್‍ನ ರುದ್ರೇಶ್ ಭಜರಂಗ ದಳದ ಕರ್ನಾಟಕ ದಕ್ಷಿಣದ ಪ್ರಾಂತ ಸಯೋಜಕ ಪ್ರಭಂಜನ್, ಬಿಜೆಪಿ ಮುಖಂಡ ಡಾ.ಸಿದ್ಧಾರ್ಥ, ಗುಂಡಾರ್ಪಿ, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬದರಿನಾಥ್, ಟೈಗರ್ ತಿಪ್ಪೇಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

Advertisement
Tags :
Advertisement