Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡಗಳ ವಿಭಾಗದ ಅಧ್ಯಕ್ಷರಾಗಿ ಬಿ.ಮಂಜುನಾಥ್ ನೇಮಕ

12:26 PM Jun 30, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.30 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‍ರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ನಗರದ ರೈಲ್ವೆ ಸ್ಟೇಷನ್ ಸಮೀಪದ ವಾಸಿ ಬಿ.ಮಂಜುನಾಥ್ ಇವರನ್ನು ನೇಮಕ ಮಾಡಲಾಗಿದೆ.

Advertisement

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಿ.ಮಂಜುನಾಥ್‍ಗೆ ನೇಮಕಾತಿ ಪತ್ರ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಜಿಲ್ಲೆಯಾದ್ಯಂತ ಸಂಚರಿಸಿ ಪರಿಶಿಷ್ಟ ಪಂಗಡ ವಿಭಾಗವನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಬಸವರಾಜ್, ಚಾಂದ್‍ಪೀರ್ ಇನ್ನು ಅನೇಕರು ಈ ಸಂರ್ದದಲ್ಲಿದ್ದರು.

Advertisement
Tags :
appointedB ManjunathbengaluruchitradurgaChitradurga District CongressPresidentScheduled Tribes Divisionsuddionesuddione newsಅಧ್ಯಕ್ಷಚಿತ್ರದುರ್ಗಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ಪರಿಶಿಷ್ಟ ಪಂಗಡಗಳ ವಿಭಾಗಬಿ.ಮಂಜುನಾಥ್‌ಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article