For the best experience, open
https://m.suddione.com
on your mobile browser.
Advertisement

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ತಡೆ : ಫೋನ್ ಪೇ ಆ್ಯಪ್ ಡಿಲೀಟ್ ಮಾಡುತ್ತಿರುವ ಕನ್ನಡಿಗರು

10:35 PM Jul 19, 2024 IST | suddionenews
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ತಡೆ   ಫೋನ್ ಪೇ ಆ್ಯಪ್ ಡಿಲೀಟ್ ಮಾಡುತ್ತಿರುವ ಕನ್ನಡಿಗರು
Advertisement

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ಅಭಿಯಾನ ಶುರುವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಸ್ತು ಎಂದಿತ್ತು. ಆದರೆ ಕೆಲವೊಂದು ಕಂಪನಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ರಾಜ್ಯ ಸರ್ಕಾರ ಅಂದೇ ಆದೇಶವನ್ನು ತಡೆಹಿಡಿದಿತ್ತು. ಈ ವಿಚಾರಕ್ಕೆ ಫೋನ್ ಪೇ ಮಾಲೀಕ ಸಮೀರ್ ಕೂಡ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

Advertisement
Advertisement

'ನನಗೆ 46 ವರ್ಷ. 15ಕ್ಕಿಂತ ಹೆಚ್ಚು ವರ್ಷಗಳ ಕಾಲ ರಾಜ್ಯದಲ್ಲಿ ಎಂದಿಗೂ ವಾಸಿಸಲಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಿದವರು. ಅವರಿಗೆ ದೇಶದಾದ್ಯಂತ ಕೆಲಸ ಮಾಡಿದ್ದಾರೆ. ಅವರ ಮಕ್ಕಳು ಕರ್ನಾಟಕದಲ್ಲಿ ಕೆಲಸಕ್ಕೆ ಅರ್ಹರಲ್ಲವೆ..? ಎಂದು ಫೋನ್ ಪೇ ಸಿಇಒ ಸಮೀರ್ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದರು. ಇದೀಗ ಫೋನ್ ಪೇ ಡಿಲೀಟ್ ಮಾಡಲು ಕನ್ನಡಿಗರು ನಿರ್ಧಾರ ಮಾಡಿದ್ದಾರೆ.

Advertisement

ಬೆಳಗ್ಗೆಯಿಂದಾನೂ ಟ್ವಿಟ್ಟರ್ ನಲ್ಲಿ ಬಾಯ್ಕಾಟ್ ಫೋನ್ ಪೇ ಟ್ರೆಂಡಿಂಗ್ ನಲ್ಲಿದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಮೀಸಲಾತಿಯನ್ನು ವಿರೋಧಿಸಿದ ಫೋನ್ ಪೇ ಡಿಲೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈಗಾಗಲೇ ಸಾಕಷ್ಟು ಜನ ಫೋನ್ ಪೇ ಅಪ್ಲಿಕೇಷನ್ ಅನ್ನು ಡಿಲೀಟ್ ಮಾಡುತ್ತಿದ್ದಾರೆ. ಇಲ್ಲಿನ ನೆಲ, ಜಲ ಉಪಯೋಗಿಸಿಕೊಂಡು 15 ವರ್ಷದಿಂದ ರಾಜ್ಯದಲ್ಲಿ ಕನ್ನಡವನ್ನು ಕಲಿಯಲು ಪ್ರಯತ್ನ ಮಾಡದೆ, ಈಗ ಕನ್ನಡಿಗರನ್ನು ಅವಮಾನಿಸಿದ್ದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೋನ್ ಪೇ ಅಪ್ಲಿಕೇಷನ್ ಅನ್ನು ಡಿಲೀಟ್ ಮಾಡುತ್ತಿದ್ದಾರೆ. ಟ್ವಿಟ್ಟರ್ ನಲ್ಲಿ ಬಾಯ್ಕಾಟ್ ಫೋನ್ ಪೇ ಟ್ರೆಂಡಿಂಗ್ ಮಾಡುತ್ತಿದ್ದಾರೆ.

Advertisement

Advertisement
Tags :
Advertisement