Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಭೂಮಿಗೆ ಭಾರವಾಗಿ ಬದುಕುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ : ಕಾಂಗ್ರೆಸ್ ವ್ಯಂಗ್ಯ

05:54 PM Dec 07, 2023 IST | suddionenews
Advertisement

ಸಿಎಂ ಸಿದ್ದರಾಮಯ್ಯ ಅವರು ತನ್ವೀರ್ ಹಶ್ಮೀ ಜೊತೆಗೆ ವೇದಿಕೆ ಹಂಚಿಕೊಂಡಿದ್ದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗರಂ ಆಗಿದ್ದರು. ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತಿರುಗೇಟು ನೀಡಿದೆ.

Advertisement

“ಆಚಾರವಿಲ್ಲದ ನಾಲಿಗೆ ನಿನ್ನ, ನೀಚ ಬುದ್ಧಿಯ ಬಿಡು ನಾಲಿಗೆ,
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ, ಚಾಚಿ ಕೊಂಡಿರುವಂತ ನಾಲಿಗೆ“ ದಾಸರ ಈ ಸಾಲುಗಳು ಬಿಜೆಪಿಯಲ್ಲಿ ಮನ್ನಣೆ ಸಿಗದೆ ಮತಿಭ್ರಮಣೆಗೊಂಡವರಂತೆ ವರ್ತಿಸುತ್ತಾ, ಭೂಮಿಗೆ ಭಾರವಾಗಿ ಬದುಕುತ್ತಿರುವ @BasanagoudaBJP ಅವರಿಗೆ ಅರ್ಪಣೆ.

ಮುಸ್ಲಿಂ ಧರ್ಮಗುರು ಸೈಯ್ಯದ್ ತನ್ವೀರ್ ಹಾಶ್ಮಿಯವರಿಗೆ ಐಸಿಸ್ ನಂಟಿದೆ ಎಂದು ಹುರುಳಿಲ್ಲದ ಆರೋಪ ಮಾಡಿದ ಅತೃಪ್ತ ಆತ್ಮ ದಂತಿರುವ ಯತ್ನಾಳ್ ಹಾಗೂ ಬಿಜೆಪಿ ಹಾಶ್ಮಿಯವರ ಸಾಮಾಜಿಕ ಜಾಲತಾಣಗಳಲ್ಲಿದ್ದ ಫೋಟೋಗಳನ್ನು ಎತ್ತಿ ಇತರ ಮುಸ್ಲಿಂ ಧಾರ್ಮಿಕ ನಾಯಕರನ್ನು ಐಸಿಸ್ ನವರೆಂದು ಬಿಂಬಿಸಲು ಹೊರಟಿದ್ದಾರೆ,

Advertisement

ಯತ್ನಾಳ್ ಅವರೇ, ಇದೇ ಹಾಶ್ಮಿಯಾವರೊಂದಿಗೆ ನಿಮ್ಮ ಹೊಸ ಬ್ರದರ್ ಕೂಡ ಜಾತ್ಯತೀತತೆಯ ಪೋಷಕು ತೊಟ್ಟಿದ್ದಾಗ ಫೋಟೋ ತೆಗೆದುಕೊಂಡಿದ್ದಾರೆ, ಈಗ ಕುಮಾರಸ್ವಾಮಿಯವರಿಗೂ ಐಸಿಸ್ ಪಟ್ಟ ಕಟ್ಟುತ್ತೀರಾ?

ಮತಿಭ್ರಮಣೆಯಾದವರ ಮಾತುಗಳನ್ನು ಕೇಳಿಕೊಂಡು ತನಿಖೆ ಮಾಡಿಸಿ ಸರ್ಕಾರದ ಸಂಪನ್ಮೂಲ, ಅಧಿಕಾರಿಗಳ ಸಮಯವನ್ನು ವ್ಯರ್ಥ ಮಾಡಲಾದೀತೆ!? ಮುಂದೆ ನಮ್ಮ ಮನೆಯ ಬಿಳಿ ನಾಯಿ ಕಪ್ಪು ಮರಿ ಹಾಕಿದೆ ತನಿಖೆ ಮಾಡಿಸಿ ಎನ್ನುವಿರಿ, ಮಾಡಿಸಲು ಸಾಧ್ಯವೇ! ಮತಿಭ್ರಮಣೆಯಾಗಿರುವ @BasanagoudaBJP ಹಾಗೂ ಬಿಜೆಪಿ ನಾಯಕರ ಗಮನಕ್ಕೆ..

ಬಿಜೆಪಿ ಐಸಿಸ್ ನಂಟು ಕಲ್ಪಿಸಿದ ಮುಸ್ಲಿಂ ಧಾರ್ಮಿಕ ಗುರುಗಳು ಕೇಂದ್ರ ಸಚಿವ @nitin_gadkari ಅವರೊಂದಿಗೂ ಕಾಣಿಸಿಕೊಂಡಿದ್ದಾರೆ, ಈಗ ನಿತಿನ್ ಗಡ್ಕರಿಯವರನ್ನೂ ತನಿಖೆಗೆ ಒಳಪಡಿಸಲು ಬಿಜೆಪಿಗರು ಆಗ್ರಹಿಸುತ್ತಾರಾ? ಸುಳ್ಳು ಆರೋಪ ಮಾಡುವ ಯತ್ನಾಳ್ ಈಗ ಯಾವ ರೀತಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತಾರೆ? ಎಂದು ಟ್ವೀಟ್ ಮಾಡಿದೆ.

Advertisement
Tags :
Basanagouda Patil YatnalbelagaviCM Siddaramaiahಕಾಂಗ್ರೆಸ್ ವ್ಯಂಗ್ಯಬಸನಗೌಡ ಪಾಟೀಲ್ ಯತ್ನಾಳ್ಬೆಳಗಾವಿಭೂಮಿಗೆ ಭಾರ
Advertisement
Next Article