For the best experience, open
https://m.suddione.com
on your mobile browser.
Advertisement

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ ಬಾಲಿವುಡ್ ಗಾಯಕ..!

08:15 PM Jun 21, 2024 IST | suddionenews
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ ಬಾಲಿವುಡ್ ಗಾಯಕ
Advertisement

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಆಗಾಗ ಚಾಲ್ತಿಗೆ ಬರುತ್ತಲೆ ಇರುತ್ತದೆ. ಇದೀಗ ಬಾಲಿವುಡ್ ಗಾಯಕರೊಬ್ಬರು ರೋಹಿಣಿ ಸಿಂಧೂರಿ ಮೇಲೆ ಜಮೀನು ಒತ್ತುವರಿಯ ಆರೋಪ ಮಾಡಿದ್ದಾರೆ.

Advertisement

ಬಾಲಿವುಡ್ ನ ಖ್ಯಾತ ಗಾಯಕ ಲಕ್ಕಿ ಅಲಿ ಗಂಭೀರ ಆರೋಪ ಮಾಡಿರುವವರು. ನ್ಯೂ ಯಲಹಂಕ ಟೌನ್ ಬಳಿ ಇರುವ ಜಮೀನು ಟ್ರಸ್ಟ್ ಒಂದಕ್ಕೆ ಸೇರಿದೆ. ಆ ಜಮೀನನ್ನು ರೋಹಿಣಿ ಸಿಂಧೂರ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವುದು ಅಲ್ಲದೆ ಕರ್ನಾಟಕ ಲೋಕಾಯುಕ್ತಕ್ಕೂ ದೂರು ನೀಡಿದ್ದಾರೆ. ದೂರಿನ ಕಾಪಿಯ ಜೊತೆಗೆ ಒತ್ತುವರಿಯ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Advertisement

ನ್ಯೂ ಯಲಹಂಕ ಟೌನ್ ಬಳಿ ಇರುವ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಕರ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿ ಅವರು ಸಹಕಾರ ನೀಡಿದ್ದಾರೆ ಎಂದು ದೂರಿದ್ದಾರೆ. ಈ ಮೂಲಕ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

Advertisement

Advertisement
Advertisement

ಈ ಸಂಬಂಧ ಅಲಿ ದೂರು ಸಲ್ಲಿಸಿರುವುದು ಇದೇ ಮೊದಲೇನು ಅಲ್ಲ. ಈ ಹಿಂದೆಯೂ ದೂರು ಸಲ್ಲಿಕೆ ಮಾಡಿದ್ದರು. 2022ರಲ್ಲೂ ಇದೇ ವಿಚಾರಕ್ಕೆ ದೂರು ನೀಡಿದ್ದರು. ಇದೀಗ ಮತ್ತೆ ಅದೇ ಆರೋಪ ಮಾಡಿದ್ದು, ಟ್ವಿಟ್ಟರ್ ನಲ್ಲಿ ನ್ಯೂ ಯಲಹಂಕ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ಜೊತೆಗೆ ರೋಹಿಣಿ ಸಿಂಧೂರಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿರುವ ಅಲಿ, ದೂರಿನ ಪ್ರತಿಯನ್ನು ಹಾಕಿದ್ದಾರೆ.

Advertisement
Tags :
Advertisement