Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದು, ಡಿಕೆಶಿ ಭೇಟಿ ಮಾಡಿದ ಸಿಪಿ ಯೋಗೀಶ್ವರ್..!

12:43 PM Oct 23, 2024 IST | suddionenews
Advertisement

ಬೆಂಗಳೂರು: ಉಪಚುನಾವಣೆಯ ರಾಜಕೀಯ ಅಖಾಡ ರಂಗೇರಿದೆ‌. ಜೆಡಿಎಸ್ ಹಾಗೂ ಬಿಜೆಪಿಗೆ ಸಿಪಿ ಯೋಗೀಶ್ವರ್ ಶಾಕ್ ನೀಡಿದ್ದಾರೆ. ಮೈತ್ರಿ ಪಕ್ಷದಿಂದ ಟಿಕೆಟ್ ಘೋಷಣೆಯಾಗಿದ್ದರು ಸಹ ಜೆಡಿಎಸ್ ಚಿಹ್ನೆ ಹಿಡಿಯಲು ಒಪ್ಪಿರಲಿಲ್ಲ. ಹೀಗಾಗಿ ನಿನ್ನೆ ಸಂಜೆಯ ತನಕವೂ ಬಿಜೆಪಿಗೆ ಸಮಯ ನೀಡಿದ್ದರು. ಏನು ಬದಲಾಗದ ಕಾರಣ ಸೀದಾ ಕಾರು ಹತ್ತಿ, ಬೆಳಗ್ಗೆಯೇ ಡಿಸಿಎಂ ಡಿಕೆ ಶಿವಕುಮಾರ್ ಮನೆಯ ಕದ ತಟ್ಟಿದರು.

Advertisement

ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದ ಯೋಗೀಶ್ವರ್, ಈಗ ದಿಢೀರನೇ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಾಗಾದ್ರೆ ಸಿಪಿ ಯೋಗೀಶ್ವರ್ ಕಾಂಗ್ರೆಸ್ ಸೇರುವುದು ಪಕ್ಕಾ ಎಂಬಂತೆ ಆಗಿದೆ. ಇದಾದ ಕೆಲವೇ ಹೊತ್ತಿನಲ್ಲಿ ಡಿಕೆ ಬ್ರದರ್ಸ್, ಕಾಂಗ್ರೆಸ್ ನ ಹಲವು ನಾಯಕರು, ಸಿಪಿ ಯೋಗೀಶ್ವರ್ ನೇರವಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ.

ಈ ವೇಳೆ ಸಿಪಿ ಯೋಗೀಶ್ವರ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದಾರೆ‌. ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದಂತ ಬೆಳವಣಿಗೆಯಾಗಿದೆ. ಸಿಪಿ ಯೋಗೀಶ್ವರ್ ಬಿಜೆಪಿ ಪಕ್ಷದಿಂದ ಟಿಕೆಟ್ ಗಾಗಿ ಕಾಯುತ್ತಿದ್ದರು. ಆದರೆ ಬಿಜೆಪಿ ಚನ್ನಪಟ್ಟಣದ ಎಲ್ಲಾ ನಿರ್ಧಾರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟಿತ್ತು. ಇದರ ಪರಿಣಾಮ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆ ಮಾಡಿದ್ದ ಯೋಗೀಶ್ವರ್ ಅವರಿಗೆ ನಿರಾಸೆ ಉಂಟಾಗಿತ್ತು. ಇದೀಗ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ನಿಂದ ಚನ್ನಪಟ್ಟಣಕ್ಕೆ ಯಾರೂ ನಿಲ್ಲುತ್ತಾರೆ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಇದರ ನಡುವೆ ಸಿಪಿ ಯೋಗೀಶ್ವರ್ ಗೆ ಕೊಡಬಹುದು ಎನ್ನಲಾಗಿದೆ.

Advertisement

Advertisement
Tags :
bengaluruby electionChannapatna by-electionchannapattanachitradurgaCM Siddaramaiahcp yogeshwardk shivakumarsuddionesuddione newsಚನ್ನಪಟ್ಟಣ ಉಪಚುನಾವಣೆಚಿತ್ರದುರ್ಗಬೆಂಗಳೂರುಸಿಎಂ ಸಿದ್ದರಾಮಯ್ಯಸಿಪಿ ಯೋಗೀಶ್ವರ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article