Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಲೋಕಸಭಾ ಚುನಾವಣೆ | ಈ ಬಾರಿ ಎಂ.ಸಿ.ರಘುಚಂದನ್‍ಗೆ ಟಿಕೆಟ್ ನೀಡಿ : ಹೊಳಲ್ಕೆರೆ ಯಾದವ ಸಮಾಜ ಒತ್ತಾಯ

06:17 PM Feb 16, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.16 : ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಹೊರಗಿನವರಿಗೆ ಮಣೆ ಹಾಕುವ ಬದಲು ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಚಿತ್ರಹಳ್ಳಿ ದೇವರಾಜ್ ಬಿಜೆಪಿ. ನಾಯಕರುಗಳಲ್ಲಿ ಮನವಿ ಮಾಡಿದರು.

Advertisement

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರತಿ ಚುನಾವಣೆಯಲ್ಲಿಯೂ ಹೊರಗಿನವರು ಬಂದು ಇಲ್ಲಿಂದ ಗೆದ್ದುಕೊಂಡು ಹೋಗುತ್ತಾರೆ. ನಂತರ ಯಾವುದೇ ಅಭಿವೃದ್ದಿಯಾಗುವುದಿಲ್ಲ. ಅದಕ್ಕಾಗಿ ಈ ಬಾರಿಯ ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರ ಪುತ್ರ ಯುವ ಉತ್ಸಾಹಿ ಎಂ.ಸಿ.ರಘುಚಂದನ್‍ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.

ಸದಾ ಬರಗಾಲವನ್ನೆ ಎದುರಿಸಿಕೊಂಡು ಅತ್ಯಂತ ಹಿಂದುಳಿದಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅಭಿವೃದ್ದಿ ಕಾಣಬೇಕಾಗಿರುವುದರಿಂದ ಪಕ್ಷದ ನಾಯಕರುಗಳು ಹೊರಗಿನವರನ್ನು ಕರೆ ತಂದು ಇಲ್ಲಿ ಚುನಾವಣೆಗೆ ನಿಲ್ಲಿಸುವ ಬದಲು ತಂದೆಯ ಗರಡಿಯಲ್ಲಿ ಪಳಗಿರುವ ಎಂ.ಸಿ.ರಘಚಂದನ್‍ಗೆ ಸಾಕಷ್ಟು ಅನುಭವವಿದೆ ಎನ್ನುವುದನ್ನು ಪರಿಗಣಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಚಿತ್ರಹಳ್ಳಿ ದೇವರಾಜ್ ವಿನಂತಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶೇಖರಪ್ಪ, ಯಾದವ ಸಮಾಜದ ಮುಖಂಡರುಗಳಾದ ಕೃಷ್ಣಮೂರ್ತಿ, ತಿಮ್ಮೇಶ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Advertisement
Tags :
chitradurgagive ticketholalkereLok Sabha electionMC Raghuchandansuddionesuddione newsYadav Samajಎಂ.ಸಿ.ರಘುಚಂದನ್‌ಚಿತ್ರದುರ್ಗಟಿಕೆಟ್ ನೀಡಿಯಾದವ ಸಮಾಜಲೋಕಸಭಾ ಚುನಾವಣೆಸುದ್ದಿಒನ್ಸುದ್ದಿಒನ್ ನ್ಯೂಸ್ಹೊಳಲ್ಕೆರೆ
Advertisement
Next Article