Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರಿಗೆ 'ಪತ್ರಿಕಾ ವಿತರಕರ ಬಂಧು' ಬಿರುದು

05:22 PM Sep 14, 2024 IST | suddionenews
Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಆಡಳಿತ ವೈಖರಿಗೆ, ಪತ್ರಕರ್ತರೊಂದಿಗೆ ಅವರಿಗಿರುವ ನಂಟಿನ ಬಂಧಕ್ಕೆ ಇಂದು ಪತ್ರಕರ್ತ ಮಿತ್ರರು ಸೇರಿ ಅವರಿಗೊಂದು ಸುಂದರವಾದ ಬಿರುದನ್ನು ನೀಡಿದ್ದಾರೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ "ಪತ್ರಿಕಾ ವಿತರಕರ ಬಂಧು" ಎನ್ನುವ ಬಿರುದು ನೀಡಿ ಸನ್ಮಾನಿಸಿದ್ದಾರೆ.

Advertisement

ಚಿತ್ರದುರ್ಗದಲ್ಲಿ ಇದೇ ಸೆಪ್ಟೆಂಬರ್ 08 ರಂದು ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನ ನಡೆದಿತ್ತು. ಸಮ್ಮೇಳನದಲ್ಲಿಯೇ ಈ ಬಿರುದನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಬೇಕಾಗಿತ್ತು. ಸಮ್ಮೇಳನಕ್ಕೆ ಬರಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ ಕಾರಣಾಂತರದಿಂದ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಗೈರಾಗಿದ್ದರು. ಹೀಗಾಗಿ ಇಂದು ಕಾವೇರಿ ನಿವಾಸಕ್ಕೇ ಬಂದ ಪತ್ರಕರ್ತರ ಸಂಘದವರು, ಕಾವೇರಿ ನಿವಾಸದಲ್ಲಿಯೇ ಬಿರುದನ್ನು ನೀಡಿ, ಗೌರವಿಸಿದರು.

ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಶಂಬುಲಿಂಗ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಕಾಂಗ್ರೆಸ್ ಮುಖಂಡರಾದ ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲ್ ಅವರು ಉಪಸ್ಥಿತರಿದ್ದು ಪತ್ರಿಕಾ ವಿತರಕ ಸಮುದಾಯಕ್ಕೆ ಸರ್ಕರ ನೀಡಿರುವ ನೆರವನ್ನು ಸ್ಮರಿಸಿ ಧನ್ಯವಾದ ಸಲ್ಲಿಸಿದರು.

Advertisement

Advertisement
Tags :
bengaluruchitradurgaCM Siddaramaiahsuddionesuddione newsಚಿತ್ರದುರ್ಗಪತ್ರಿಕಾ ವಿತರಕರ ಬಂಧುಬಿರುದುಬೆಂಗಳೂರುಸಿಎಂ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article