Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯ ಪತ್ರಕರ್ತ ಶಶಿಧರ್ ಭಟ್ ಅವರಿಗೆ ಚಿಕಿತ್ಸೆಗೆ ನೆರವಾದ ಸಿಎಂ ಸಿದ್ದರಾಮಯ್ಯ

04:34 PM Jul 22, 2024 IST | suddionenews
Advertisement

 

Advertisement

ಬೆಂಗಳೂರು: ಹಿರಿಯ ಪತ್ರಕರ್ತರು, ಸುದ್ದಿ ಟಿವಿ ಸಂಸ್ಥಾಪಕರಾಗಿದ್ದ ಶಶಿಧರ್ ಭಟ್ ಅವರಿಗೆ ಅನಾರೋಗ್ಯ ಕಾಡುತ್ತಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದ್ದಾರೆ.

'ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ' ಎಂದು ಪೋಸ್ಟ್ ಹಾಕಿದ್ದಾರೆ.

Advertisement

ಶಶಿಧರ್ ಭಟ್ ಅವರ ಈ ಪರಿಸ್ಥಿತಿ ಮಾಧ್ಯಮದವರು, ಹಿತೈಷಿಗಳು ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಶಶಿಧರ್ ಭಟ್ ಅವರ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆಬಕೆಲ ಪತ್ರಕರ್ತರು ಸಹಾಯಕ್ಕೆ ಧಾವಿಸಿದ್ದಾರೆ. ಹಣಕಾಸಿನ ನೆರವು ಒದಗಿಸಲು ದಾರಿ ಹುಡುಕುತ್ತಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಸಹಾಯಕ್ಕೆ ಬಂದಿರುವುದು, ಶಶಿಧರ್ ಭಟ್ ಅವರ ಕುಟುಂಬಕ್ಕೂ ಸ್ವಲ್ಪ ನೆಮ್ಮದಿ ತಂದಿದೆ.

ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಶಶಿಧರ್ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರೈ ಅವರು ಕೂಡ ಆಸ್ಪತ್ರೆಗೆ ಧಾವಿಸಿ, ಶಶಿಧರ್ ಭಟ್ ಅವರ ಆರೋಗ್ಯ ವಿಚಾರಿಸಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೀವಿ ಎಂಬ ಧೈರ್ಯ ತುಂಬಿದ್ದಾರೆ.

Advertisement
Tags :
bengaluruchitradurgaCM SiddaramaiahHELPEDSenior journalistShashidhar Bhattsuddionesuddione newstreatmentಚಿಕಿತ್ಸೆಚಿತ್ರದುರ್ಗನೆರವುಬೆಂಗಳೂರುಶಶಿಧರ್ ಭಟ್ಸಿಎಂ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯ ಪತ್ರಕರ್ತ
Advertisement
Next Article