Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

08:57 PM Apr 18, 2024 IST | suddionenews
Advertisement

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ. ಕಾಲೇಜು ಓದುತ್ತಿದ್ದಾಕೆ ಇಂದು ಪ್ರಾಣ ಕಳೆದುಕೊಂಡಿದ್ದಾರೆ. ಬಿವಿಬಿ ಕಾಲೇಜಿನಲ್ಲಿ ನಡೆದ ಘಟನೆಗೆ ಹುಬ್ಬಳ್ಳಿ-ಧಾರವಾಡ ಮಂದಿ ಬೆಚ್ಚಿ ಬಿದ್ದಿದ್ದಾರೆ.

Advertisement

 

ನೇಹಾ ಬಿವಿಬಿ ಕಾಲೇಜಿನಲ್ಲಿ ಎಂಎಸ್ಸಿ‌ ಓದುತ್ತಿದ್ದರು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಫಯಾಜ್ ಪ್ರೀತೊಸುವಂತೆ ಪೀಡಿಸಿದ್ದಾನೆ. ಆದರೆ ನೇಹಾ ಪ್ರೀತಿಯನ್ನು ನಿರಾಕರಣೆ ಮಾಡಿದ್ದಾಳೆ. ಕಳೆದ ಕೆಲವು ದಿನಗಳಿಂದಾನೂ ನೇಹಾ ಹಿಂದೆ ಬಿದ್ದಿದ್ದ ಫಯಾಜ್,‌ ಪ್ರೀತಿ ಮಾಡುವಂತೆ ಕೇಳಿದ್ದಾನೆ. ಆದರೆ ನೇಹಾ ಅದಕ್ಕೆ ಒಪ್ಪಿಲ್ಲ. ಇದರಿಂದ ಕೋಪಗೊಂಡ ಫಯಾಜ್ ಚಾಕು ಇರಿದು ಕೊಲೆ ಮಾಡಿದ್ದಾನೆ. ಗುತ್ತಿಗೆಯ ಭಾಗದಲ್ಲಿ ಎರಡು ಕಡೆ ಚಾಕು ಇರಿದಿದ್ದಾನೆ.

Advertisement

 

ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೊಲೆ ಮಾಡಿರುವ ಆರೋಪಿಯನ್ನ ಬಂಧನ ಮಾಡಲಾಗಿದೆ. ನಿರಂಜನ ಹಿರಮೇಠ ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಬಹಳ ಒಳ್ಳೆಯ ಹುಡಗಿ,ಯಾವಾಗಲೂ ಅಂಕಲ್ ಎಂದು ಕರೆಯುತ್ತಿದ್ದಳು. ಹುಬ್ಬಳ್ಳಿಯಲ್ಲಿ ಹೀಗಾಗಬಾರದಿತ್ತು ಎಂದರು. ಮಗಳನ್ನು ಕಳೆದುಕೊಂಡ ಪೋಷಕರು ದುಃಖದಲ್ಲಿದ್ದಾರೆ.

Advertisement
Tags :
Corporator's daughterdeathDharwadhublirefusing loveShocked peopleಕಾರ್ಪೋರೇಟರ್ ಪುತ್ರಿಚಾಕುವಿನಿಂದ ಇರಿದು ಕೊಲೆಧಾರವಾಡಬೆಚ್ಚಿ ಬಿದ್ದಹುಬ್ಬಳ್ಳಿಹುಬ್ಬಳ್ಳಿ ಧಾರವಾಡ ಮಂದಿ
Advertisement
Next Article