Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ : ಲೋಕಾಯುಕ್ತದಲ್ಲಿ ದಾಖಲಾಯ್ತು ದೂರು

04:03 PM Nov 27, 2023 IST | suddionenews
Advertisement

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರವಾಗಿರುವ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿಶೇಷ ಅಧಿಕಾರಿ ಬಿ ಹೆಚ್ ನಿಶ್ಚಲ್ ಅವರ ಮೇಲೆ ಕೋಟ್ಯಾಂತರ ರೂಪಾಯಿ ಹಗರಣದ ಆರೋಪ ಕೇಳಿ ಬಂದಿದೆ.

Advertisement

ಬಿ ಹೆಚ್ ನಿಶ್ಚಲ್ ಅವರು ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯಲ್ಲಿಯೇ ಎಸ್ ಸಿ ಪದ್ಮರಾಜು ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದರು. ಹಗರಣಗಳ ವಿಚಾರವಾಗಿ ದಾಖಲೆ ಸಮೇತ ದೂರು ನೀಡಲಾಗಿದೆ. ರಾಜ್ಯಪಾಲರು ಹಾಗೂ ಲೋಕಾಯುಕ್ತರಿಗೆ ಈ ಸಂಬಂಧ ದೂರು ನೀಡಲಾಗಿದೆ. ಈ ದೂರಿನಲ್ಲಿ ಸಚಿವೆ ಹಾಗೂ ಅವರ ಸಹೋದರನ ಹೆಸರು ಸಹ ಕೇಳಿ ಬಂದಿದೆ.

ದೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹಾಗುಹ ಅವರ ಸಹೋದರ ಎಂಎಲ್ಸಿ ಹಟ್ಟಿಹೊಳಿ ಅವರ ಹೆಸರನ್ನು ಸೇರಿಸಲಾಗಿದೆ. ಸಚಿವೆ ಹಾಗೂ ಸಹೋದರನ ಹೆಸರೇಳಿಕೊಂಡು ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಸಚಿವರು ಹೇಳಿದ್ದಾರೆಂದು ಕೋಟ್ಯಾಂತರ ಹಣ ಲೂಟಿ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಬಿ ಹೆಚ್ ನಿಶ್ಚಲ್ ವಿರುದ್ಧ ಹತ್ತಾರು ಪ್ರಕರಣಗಳನ್ನು ಉಲ್ಲೇಖ ಮಾಡಲಾಗಿದೆ.

Advertisement

Advertisement
Tags :
bangalorecomplaint filedCorruption Women and Child Welfare DepartmentLokayuktaಕೋಟಿ ಕೋಟಿ ಭ್ರಷ್ಟಾಚಾರದಾಖಲಾಯ್ತು ದೂರುಬೆಂಗಳೂರುಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಲೋಕಾಯುಕ್ತ
Advertisement
Next Article