For the best experience, open
https://m.suddione.com
on your mobile browser.
Advertisement

ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ : ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ

06:27 PM Jun 20, 2024 IST | suddionenews
ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ   ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ
Advertisement

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದರ್ಶನ್ ಸೇರಿದಂತೆ ಆರು ಜನರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ರೇಣುಕಾಸ್ವಾಮಿ ಅವರ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇಂದು ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

Advertisement

ಕಳೆದ ಬಾರಿಯೇ ಕಸ್ಟಡಿ ಅಂತ್ಯವಾದ ವೇಳೆ ಪವಿತ್ರಾ ಹಾಗೂ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡುವುದಕ್ಕೆ ಮನವಿ ಮಾಡಿದ್ದರು. ಆದರೆ ಪೊಲೀಸರು ಸ್ಥಳ ಮಹಜರು, ತನಿಖೆ ಇದೆ ಅಂತ ಹೇಳಿ ಕಸ್ಟಡಿಗೆ ತೆಗೆದುಕೊಂಡಿದ್ದರು‌. ಆಗ ಐದು ದಿನಗಳ ಮೇರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಇಂದು ಎರಡನೇ ಅವಧಿ ಮುಗಿದ ಹಿನ್ನೆಲೆ ಸಂಜೆ ವೇಳೆಗೆ ಪೊಲೀಸರು ಕೋರ್ಟ್ ಮುಂದೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ಹಾಜರುಪಡಿಸಿತ್ತು. ನ್ಯಾಯಾಧೀಶರು ಎರಡು ಕಡೆಯ ವಾದ-ಪ್ರತಿವಾದವನ್ನು ಆಲಿಸಿದ್ದರು‌. ಇತ್ತ ರಿಮ್ಯಾಂಡ್ ಅರ್ಜಿಯಲ್ಲಿ ದರ್ಶನ್ ಹಾಗೂ ಆರು ಮಂದಿಯನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಲಾಗಿತ್ತು.

Advertisement

ಈ ಸಂಬಂಧ ಕೊಲೆ ಆರೋಪ ಇರುವ ದರ್ಶನ್, ವಿನಯ್, ಪ್ರದೂಶ್, ನಾಗರಾಜ, ಲಕ್ಷ್ಮಣ, ಧನರಾಜ್ ಎಂಬುವವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರಾ ಗೌಡ ಸೇರಿದಂತೆ ಆರು ಜನ ಜೈಲು ಪಾಲಾಗಿದ್ದಾರೆ. ಆರೋಪಿಗಳ ಸ್ಯಾಂಪಲ್ ಅನ್ನು ಎಫ್ಎಸ್ಎಲ್ ಗೆ ಕಳುಹಿಸಲಾಗಿದ್ದು, ಅದರ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಹೀಗಾಗಿ ಮುಂದಿನ ತನಿಖೆಗಾಗಿ ಮತ್ತೆ ಕಸ್ಟಡಿಗೆ ನೀಡಲಾಗಿದೆ.

Advertisement

Advertisement
Advertisement
Advertisement
Tags :
Advertisement