Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ.. ವಿನಯ್, ಪವನ್ ಸೂಚನೆ ಮೇರೆಗೆ ಅಪಹರಣವಾಗಿದೆ : ಜಾಮೀನು ಅರ್ಜಿಯಲ್ಲಿ ಉಲ್ಲೇಖ..!

06:25 PM Sep 22, 2024 IST | suddionenews
Advertisement

ಬೆಂಗಳೂರು: ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪ್ಲ್ಯಾನ್ ಮಾಡಿ ಕರೆತಂದು, ಪಟ್ಟಣಗೆರೆ ಶೆಡ್ ನಲ್ಲಿ ಕೊಲೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು 17 ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ. ಚಾರ್ಜ್ ಶೀಟ್ ನಲ್ಲೂ ಆರೋಪಿಗಳ ಪಟ್ಟಿ ಹಾಗೆಯೇ ಇದೆ. ಸದ್ಯ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆ ಅರ್ಜಿಯಲ್ಲಿನ ಮಾಹಿತಿಯು ಖಾಸಗಿ ಚಾನೆಲ್ ಗಳಿಗೆ ಸೋರಿಕೆಯಾಗಿದೆ. ಅದರಲ್ಲೂ ದರ್ಶನ್ ಗೂ ರೇಣುಕಾಸ್ವಾಮಿ ಕೊಲೆಗೂ ಯಾವುದೇ ಸಂಬಂಧವಿಲ್ಲ ಎಂಬುದು ಉಲ್ಲೇಖವಾಗಿದೆಯಂತೆ.

Advertisement

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ ಗೂ ಯಾವುದೇ ಸಂಬಂಧವಿಲ್ಲ. ಆದರೆ ಸುಮ್ಮನೆ ದರ್ಶನ್ ಹೆಸರನ್ನು ಎಳೆದು ತರಲಾಗಿದೆ. ರೇಣುಕಾಸ್ವಾಮಿ ಅಪಹರಣ ಮಾಡಲು ನಾನು ಸೂಚನೆ ನೀಡಿಲ್ಲ. ರೇಣುಕಾಸ್ವಾಮಿ ಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಎ10 ಆರೋಪಿ ವಿನಯ್ ಹಾಗೂ ಎ3 ಆರೋಪಿ ಪವನ್ ಸೂಚನೆ ಮೇರೆಗೆ ಅಪಹರಣ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

ಇನ್ನು ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಿನ್ನೆಯಷ್ಟೇ ನಡೆದಿದೆ. ವಾದ ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ನಾಳೆಗೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಸಾವುರಾರು ಪುಟಗಳ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಅವರು ಹೊಡೆದಿರುವ ಬಗ್ಗೆಯೂ ಪೊಲೀಸರು ಉಲ್ಲೇಖ ಮಾಡಲಾಗಿದೆ. ತೀರಾ ಬರ್ಬರವಾಗಿ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಲಾಗಿದೆ. ದರ್ಶನ್ ಪರ ವಕೀಲರು ಚಾರ್ಜ್ ಶೀಟ್ ಅನ್ನು ಗಮನವಿಟ್ಟು ನೋಡಿ ಈಗ ಕೋರ್ಟ್ ಮುಂದೆ ವಾದಕ್ಕೆ ನಿಂತಿದ್ದಾರೆ.

Advertisement

Advertisement
Tags :
bail applicationbengaluruchitradurgadarshanPawanRenukaswamy's murdersuddionesuddione newsVinayಚಿತ್ರದುರ್ಗಜಾಮೀನು ಅರ್ಜಿದರ್ಶನ್ಪವನ್ಬೆಂಗಳೂರುರೇಣುಕಾಸ್ವಾಮಿ ಕೊಲೆವಿನಯ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article