Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಗಾಡಿಗಳಿಗೆ ದರ್ಶನ್ ಖೈದಿ ನಂಬರ್ : ಕೇಸ್ ಹಾಕುವ ಎಚ್ಚರಿಕೆ ನೀಡಿದ ಟ್ರಾಫಿಕ್ ಪೊಲೀಸರು..!

02:38 PM Jun 30, 2024 IST | suddionenews
Advertisement

 

Advertisement

 

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಜೈಲಿನಲ್ಲಿದ್ದಾರೆ. ಅವರಿಗೆ ಖೈದಿ ನಂಬರ್ 6106 ನೀಡಲಾಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸಪೋರ್ಟ್ ಮಾಡುವುದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ಈ ನಂಬರ್ ಗೂ ಬಾರೀ ಡಿಮ್ಯಾಂಡ್ ಬಂದಿದೆ. ದರ್ಶನ್ ಖೈದಿ ನಂಬರ್ ಅನ್ನು ಅಭಿಮಾನಿಗಳು ತಮ್ಮ ತಮ್ಮ ಗಾಡಿಗಳ ಮೇಲೆ ಅಂಟಿಸುತ್ತಿದ್ದಾರೆ. ಹೀಗಾಗಿ ಟ್ರಾಫಿಕ್ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ.

Advertisement

ಖೈದಿ ನಂಬರ್ ಅಂಟಿಸುವ ಬರದಲ್ಲಿ ಅಭಿಮಾನಿಗಳು ತಮ್ಮ ತಮ್ಮ ಗಾಡಿ ನಂಬರ್ ಗಳನ್ನೇ ಮರೆ ಮಾಚುತ್ತಿದ್ದಾರೆ. ಇದು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದಂತೆಯೇ ಸರಿ. ಹೀಗಾಗಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ ಕೇಸ್ ದಾಖಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ನೀಡಿದ್ದಾರೆ. ನಂಬರ್ ಪ್ಲೇಟ್ ಮೇಲೆ ಖೈದಿ ನಂಬರ್ ಅಂಟಿಸುವವರಿಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಿಸುವುದಾಗಿ ತಿಳಿಸಿದ್ದಾರೆ.

 

ಇನ್ನು ದರ್ಶನ್ ಅವರನ್ನು ಭೇಟಿಯಾಗಲು ಅಭಿಮಾನುಗಳು ಕೂಡ ಹರಸಾಹಸ ಪಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಮುಂದೆ ಹೋಗಿ ನಿಂತು ಬರುತ್ತಿದ್ದಾರೆ. ಕುಟುಂಬಸ್ಥರಿಗೆ ಬಿಟ್ಟರೆ ಅಭಿಮಾನಿಗಳಿಗಾಗಲೀ, ಸಾರ್ವಜನಿಕರಿಗಾಗಲಿ ಭೇಟಿಗೆ ಅವಕಾಶ ನೀಡುತ್ತಿಲ್ಲ. ವಿಜಯಲಕ್ಷ್ಮೀ ತನ್ನ ಪತಿಯನ್ನು ಬಿಡಿಸಲು ಫೇಮಸ್ ವಕೀಲರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗೆ ಸತ್ಯಮೇವ ಜಯತೆ ಎಂದು ಪೋಸ್ಟ್ ಕೂಡ ಹಾಕಿದ್ದರು. ಜೊತೆಗೆ ಅಭಿಮಾನಿಗಳಿಗೆ ಶಾಂತರೀತಿಯಿಂದ ಇರಲು ಸೂಚನೆಯನ್ನು ನೀಡಿದ್ದರು. ನಿನ್ನೆಯಷ್ಟೇ ರಕ್ಷಿತಾ ಹಾಗೂ ಪ್ರೇಮ್ ಜೈಲಿಗೆ ಭೇಟಿ ಕೊಟ್ಟು, ದರ್ಶನ್ ಅವರನ್ನು ಮಾತನಾಡಿಸಿಕೊಂಡು ಬಂದಿದ್ದಾರೆ. ವಿನೋದ್ ಪ್ರಭಾಕರ್ ಕೂಡ ಜೈಲಿಗೆ ಹೋಗಿ ಮಾತನಾಡಿಸಿಕೊಂಡು ಬಂದಿದ್ದಾರೆ.

Advertisement
Tags :
bengalurucasechitradurgadarshanfileKhaidi numbersuddionesuddione newstraffic policevehicleswarnedಎಚ್ಚರಿಕೆಕೇಸ್ಖೈದಿ ನಂಬರ್ಗಾಡಿಗಳುಚಿತ್ರದುರ್ಗಟ್ರಾಫಿಕ್ ಪೊಲೀಸರುದರ್ಶನ್ಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article