Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜುಲೈ 28 ರಂದು ಮಂಗಳೂರಿನಲ್ಲಿ ದೇವಾಂಗಗ ಸಮಾಜದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

06:38 PM Jul 26, 2024 IST | suddionenews
Advertisement

ಸುದ್ದಿಒನ್, ಮಂಗಳೂರು, ಜುಲೈ. 26 :  ಆಶೋಕ ನಗರದ ದೇವಾಂಗ ಭವನದಲ್ಲಿ ಜುಲೈ 28 ಕ್ಕೆ ದೇವಾಂಗ ಸಮಾಜದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ನಡೆಯಲಿದೆ.

Advertisement

ಪ್ರಸಕ್ತ ಸಾಲಿನಲ್ಲಿ ಶೇ.95ಕ್ಕಿಂತ ಹೆಚ್ಚಿನ ಅಂಕಗಳಿಸಿದ 350 ರಾಜ್ಯದಲ್ಲಿನ ಸಮಾಜದ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಹಂಪಿ ಹೇಮಕೂಟ ದೇವಾಂಗ ಸಮಾಜದ ದಯಾನಂದಪುರಿ ಸ್ವಾಮಿಜಿ, ಕೇರಳದ ಕೊಂಡೇವೂರಿನ ಯೋಗನಂದ ಸರಸ್ವತಿ ಸ್ವಾಮೀಜಿ, ಮಂಗಳೂರಿನ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ರಾಜ್ಯಸಭಾ ಸದಸ್ಯ ಕೆ. ನಾರಾಯಣ ಅಧ್ಯಕ್ಷತೆವಹಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ , ಮಾಜಿ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ, ದೇವರಾಜ ಅರಸ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸಂಘದ ಕಾರ್ಯದರ್ಶಿ ಎಸ್. ಸುರೇಶ್, ಚಿತ್ರದುರ್ಗ ಸಂಘದ ಗೌರವಾಧ್ಯಕ್ಷ ಹೆಚ್.ಯೋಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
bengaluruchitradurgaDevangaga SamajaMangaloreState-levelsuddionesuddione newsTalent Awardಚಿತ್ರದುರ್ಗದೇವಾಂಗ ಸಮಾಜಪ್ರತಿಭಾ ಪುರಸ್ಕಾರಬೆಂಗಳೂರುಮಂಗಳೂರುರಾಜ್ಯ ಮಟ್ಟದಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article