Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಜಿ.ಆರ್.ಜೆ. ನೇಮಕ

08:49 AM Jan 28, 2024 IST | suddionenews
Advertisement

 

Advertisement

ಸುದ್ದಿಒನ್ : ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ವರ್ಗಾವಣೆಯಾಗಿದ್ದ ದಿವ್ಯಾಪ್ರಭು ಅವರನ್ನು ಧಾರವಾಡ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಅದೇಶಿದೆ.

ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ವರ್ಗಾವಣೆ ಮಾಡಿ ದಿವ್ಯಾಪ್ರಭು ಅವರನ್ನು ನೇಮಿಸಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಗುರುದತ್ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ತದನಂತರ ಕಾಂಗ್ರೆಸ್ ಆಡಳಿತ ಆರಂಭವಾದ ಏಳು ತಿಂಗಳ ನಂತರ ವರ್ಗಾವಣೆಯಾಗಿದ್ದು, ಅವರಿಗೆ ಇನ್ನೂ ಯಾವುದೇ ಸ್ಥಳವನ್ನ ತೋರಿಸಿಲ್ಲ.

Advertisement

ಈ ಹಿಂದೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಮಟ್ಟದಲ್ಲಿ ಚುನಾವಣಾ ಆಯೋಗ ಪ್ರಶಸ್ತಿಗೆ ಪರಿಗಣಿಸಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದ ಅವರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪ್ರಧಾನ ಮಾಡಿದ್ದರು.

Advertisement
Tags :
DC Divyaprabhu G.R.J.Dharwad DistrictDivya Prabhu G.R.J.suddionesuddione newsಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆದಿವ್ಯಾಪ್ರಭು ಜಿ.ಆರ್.ಜೆ.ಧಾರವಾಡ ಜಿಲ್ಲೆನೂತನ ಜಿಲ್ಲಾಧಿಕಾರಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article