For the best experience, open
https://m.suddione.com
on your mobile browser.
Advertisement

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಹತ್ಯೆ : ರಾಜಕೀಯ ದ್ವೇಷದಿಂದ ಹತ್ಯೆಯಾಯ್ತಾ..?

06:17 PM Oct 23, 2023 IST | suddionenews
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಹತ್ಯೆ   ರಾಜಕೀಯ ದ್ವೇಷದಿಂದ ಹತ್ಯೆಯಾಯ್ತಾ
Advertisement

ಕೋಲಾರ: ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಎಂ ಶ್ರೀನಿವಾಸ್ ಮೇಲೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರು ಜನರು ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಶ್ರೀನಿವಾಸಪುರದ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಈ ಘಟನೆ ನಡೆದಿದೆ.

Advertisement
Advertisement

ಮೃತ ಶ್ರೀನಿವಾಸ್, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿದ್ದರು. ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಾಗಾರಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಟ್ಯಾಕ್ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದು, ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೋಲಾರ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ, ಅನಿಲ್ ಎಂಬುವವರನ್ನು ಕೊಲೆ ಮಾಡಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿದೆ.

Advertisement

ಇನ್ನು ಮೃತ ಶ್ರೀನಿವಾಸ್ ಪುರಸಭೆಯ ಮಾಜಿ ಅಧ್ಯಕ್ಷರಾಗಿ, ಎಪಿಎಂಸಿಯ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು‌. ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

Advertisement

Advertisement
Tags :
Advertisement